18 ದಿನದ ಹಸುಗೂಸನ್ನು ಹೆತ್ತಮ್ಮನೇ ಕೊಂದಿದ್ದೇಕೆ?!

Webdunia
ಶುಕ್ರವಾರ, 30 ನವೆಂಬರ್ 2018 (08:52 IST)
ಚೆನ್ನೈ: ಪ್ರಪಂಚದಲ್ಲಿ ಕೆಟ್ಟ ಮಕ್ಕಳಿರುತ್ತಾರೆಯೇ ಹೊರತು, ಕೆಟ್ಟ ತಾಯಿ ಇರಲ್ಲ ಎಂಬ ಮಾತಿಗೆ ಅಪವಾದವಾಗಿ ನಡೆದುಕೊಂಡಿದ್ದಾಳೆ ಈ ತಾಯಿ.


18 ದಿನದ ಹಸುಗೂಸನ್ನು ಕೈಯಾರೆ ಕೊಂದು ಅನಾರೋಗ್ಯದಿಂದ ಸತ್ತಿತೆಂದು ನಾಟಕವಾಡಿ ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. 15 ದಿನದ ಹಿಂದೆ ಈ ಘಟನೆ ನಡೆದಿದ್ದು, ಪೊಲೀಸರು ಈಗ ನಿಜಾಂಶ ಪತ್ತೆ ಮಾಡಿದ್ದಾರೆ.

ಚೆನ್ನೈಯಲ್ಲಿ ಈ ಘಟನೆ ನಡೆದಿದೆ. ಮೊದಲೇ ಒಂದೂವರೆ ವರ್ಷದ ಹೆಣ್ಣು ಮಗುವಿನ ತಾಯಿಯಾಗಿರುವ ಈಕೆ ಎರಡನೇ ಬಾರಿಗೂ ಹೆಣ್ಣು ಮಗುವಿಗೆ ಜನ್ಮವಿತ್ತಿದ್ದಾಳೆ. ಈ ವಿಚಾರವಾಗಿ ಗಂಡ ತನ್ನಲ್ಲಿ ಜಗಳವಾಡುತ್ತಿದ್ದ. ಆತನಿಗೆ ಮೊದಲೇ ಬೇರೊಂದು ಮದುವೆಯಾಗಿ ಅದರಲ್ಲೂ ಹೆಣ್ಣು ಮಗುವಿತ್ತು. ಆದರೆ ಈ ವಿಚಾರವನ್ನು ಮುಚ್ಚಿಟ್ಟಿದ್ದ. ಈಗ ಮತ್ತೊಂದು ಹೆಣ್ಣು ಮಗುವೇ ಆಯಿತೆಂದು ತನ್ನ ಜತೆ ಜಗಳವಾಡುತ್ತಿದ್ದ.

ಇದೇ ಕಾರಣಕ್ಕೆ ಈ ಮಗುವಿನ ತಲೆಯನ್ನು ನೆಲಕ್ಕೆ ಹೊಡೆದು ಸಾಯಿಸಿದೆ ಎಂದು ಆರೋಪಿ ತಾಯಿ ಬಾಯ್ಬಿಟ್ಟಿದ್ದಾಳೆ. ಕೃತ್ಯವೆಸಗಿದ ನಂತರ ಮಗುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ತನ್ನ ಮಗು ಹಾಲು ಕುಡಿಯುತ್ತಿಲ್ಲ ಎಂದು ನಾಟಕವಾಡಿದ್ದಾಳೆ. ಆದರೆ ಅಷ್ಟರಲ್ಲೇ ಮಗು ಸಾವನ್ನಪ್ಪಿತ್ತು. ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರಿಂದ ಆಸ್ಪತ್ರೆ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಸಾವಿಗೆ ನಿಖರ ಕಾರಣ ತಿಳಿಸಿದಾಗ ಸತ್ಯ ಬಯಲಿಗೆ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments