Webdunia - Bharat's app for daily news and videos

Install App

ಹೆತ್ತ ತಾಯಿಯ ಕತ್ತು ಸೀಳಿದ ಮಗ!

Webdunia
ಭಾನುವಾರ, 10 ಜುಲೈ 2022 (08:10 IST)
ಮುಂಬೈ : ಆಸ್ತಿ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದ 21 ವರ್ಷದ ಯುವಕನೊಬ್ಬ ತನ್ನ 46 ವರ್ಷದ ತಾಯಿಯ ಕತ್ತು ಸೀಳಿ ಹತ್ಯೆಗೈದು, ತಾನೂ ಕೂಡ ರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಆರೋಪಿಯನ್ನು ಜಯೇಶ್ ಪಾಂಚಾಲ್ ಎಂದು ಗುರುತಿಸಲಾಗಿದ್ದು, ಮುಲುಂಡ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಹಳಿಗೆ ಹಾರಿ ಸಾಯಲು ಯತ್ನಿಸಿದ ಜಯೇಶ್ ಪಾಂಚಾಲ್ನನ್ನು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ರಕ್ಷಿಸಿದ್ದಾರೆ. 

ವರ್ಧಮಾನ್ ನಗರದ ಹೌಸಿಂಗ್ ಸೊಸೈಟಿಯಲ್ಲಿದ್ದ ಜಯೇಶ್ ಪಾಂಚಾಲ್ ಅವರ ಫ್ಲಾಟ್ನ ಹೊರಗೆ ಆಗಿದ್ದ ರಕ್ತದ ಕಲೆಗಳನ್ನು ಕಂಡು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ನೋಡಿದ್ದಾರೆ.

ಅಲ್ಲದೇ ಘಟನಾ ಸ್ಥಳದಲ್ಲಿ ಗುಜರಾತಿ ಭಾಷೆಯಲ್ಲಿ ಬರೆದ ಚೀಟಿ ಹಾಗೂ ಚಾಕು ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ. 

ಬಳಿಕ ಪೊಲೀಸರು ಮೃತ ಮಹಿಳೆಯ ಪತಿಗೆ ಕರೆ ಮಾಡಿದ್ದು, ಈ ವೇಳೆ ಕೆಲವು ಆಸ್ತಿ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದ ತಮ್ಮ ಮಗ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments