ಭಾರತವನ್ನು ಕ್ರಿಶ್ಚಿನೀಕರಣ ಮಾಡುವ ಪಿತೂರಿಯಲ್ಲಿ ನೊಬೆಲ್ ಪ್ರಶಸ್ತಿ ವಿಜೇತೆ ಮದರ್ ತೆರೇಸಾ ಕೂಡ ಭಾಗವಾಗಿದ್ದರು ಎಂದು ಹೇಳುವುದರ ಮೂಲಕ ಬಿಜೆಪಿ ಸಂಸ ಯೋಗಿ ಆದಿತ್ಯನಾಥ್ ಮತ್ತೊಂದು ವಿವಾದವನ್ನು ಸೃಷ್ಟಿಸಿದ್ದಾರೆ.
ಶನಿವಾರ ಉತ್ತರ ಪ್ರದೇಶದಲ್ಲಿ ರಾಮಕಥಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನ್ನಾಡುತ್ತಿದ್ದ ಗೋರಕ್ಪುರ ಸಂಸದ, "ಭಾರತವನ್ನು ಕ್ರಿಶ್ಚಿನೀಕರಣ ಮಾಡುವ ಕುತಂತ್ರದಲ್ಲಿ ತೇರೇಸಾ ಪಾತ್ರ ಕೂಡ ಇತ್ತು. ಕ್ರಿಶ್ಚಿಯನೈಸೇಷನ್ ಪ್ರಕರಣಗಳು ಅರುಣಾಚಲ ಪ್ರದೇಶ, ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ಸೇರಿದಂತೆ ಈಶಾನ್ಯ ಭಾಗಗಳಲ್ಲಿ ಪ್ರತ್ಯೇಕತಾವಾದಿ ಚಳುವಳಿಗಳಿಗೆ ಕಾರಣವಾಯಿತು", ಎಂದು ಹೇಳಿದ್ದಾರೆ.
"ನಿಮಗೆ ಈಶಾನ್ಯ ರಾಜ್ಯಗಳ ಪರಿಸ್ಥಿತಿ ಗೊತ್ತಿಲ್ಲ. ನೀವೊಮ್ಮೆ ಅಲ್ಲಿಗೆ ಭೇಟಿ ನೀಡಿ ವಾಸ್ತವ ಸಂಗತಿಯನ್ನು ಅರಿಯಬೇಕು", ಎಂದು ಅವರು ಕಳವಳವನ್ನು ವ್ಯಕ್ತ ಪಡಿಸಿದ್ದಾರೆ.
2015ರಲ್ಲಿ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಸಹ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. ತೇರೇಸಾ ಗುರಿ ಕೇವಲ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುವುದಾಗಿತ್ತು ಎಂದು ಅವರು ಹೇಳಿದ್ದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.