ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಮಗುವನ್ನು ಹಿಡಿದುಕೊಂಡು ಹತ್ಯೆ ಮಾಡಿಸಿದ ತಾಯಿ!

Webdunia
ಶುಕ್ರವಾರ, 15 ಡಿಸೆಂಬರ್ 2017 (20:00 IST)
ತಾಯಿಯ ಅನೈತಿಕ ಸಂಬಂಧ ಬಯಲಾಗಲಿದೆ ಎಂಬ ಆತಂಕಕ್ಕೆ ಆರು ವರ್ಷದ ಮಗಳನ್ನು ಕೊಲೆ ಮಾಡಿರುವ ಘಟನೆ ನವದೆಹಲಿಯ ಗಾಜಿಯಾಪುರ್ ನಲ್ಲಿ ನಡೆದಿದೆ.

29ವರ್ಷದ ಮಹಿಳೆಯ ಜೊತೆ 23 ವರ್ಷದ ಸುಧೀರ್ ಅಕ್ರಮ ಸಂಬಂಧ ಹೊಂದಿದ್ದು, ಪತಿ ಮದ್ಯಪಾನ ಮಾಡಲು ಸಂಜೆ ಹೊತ್ತಲ್ಲಿ ಹೊರಗಡೆ ಹೋದಾಗ ಮನೆಗೆ ಬಂದ ಸುಧೀರ್ ಮಹಿಳೆಯೊಂದಿಗೆ ರತಿಕ್ರೀಡೆ  ನಡೆಸಿದಾಗ ಮಗಳು ನೋಡಿದ್ದಾಳೆ. ಇದನ್ನು ತಂದೆಗೆ ಹೇಳುತ್ತೇನೆ ಎಂದು ಮಗು ಹೇಳಿದ್ದಕ್ಕೆ ಪಕ್ಕದ ಮನೆಯ ಟೆರಸ್ ಮೇಲೆ ಕರೆದುಕೊಂಡು ಹೋಗಿ ಮಗುವನ್ನು ಕೊಲೆಗೈದಿದ್ದಾರೆ.

ಸುಧೀರ್ ಮಗುವಿನ ಕತ್ತು ಸೀಳಿ ಕೊಲೆಗೈದರೆ, ತಾಯಿ ಇದಕ್ಕೆ ಸಹಕಾರ ನೀಡಿ ಪ್ರಿಯಕರನಿಂದ ಕೊಲೆ ಮಾಡಿಸಿದ್ದಾಳೆ. 
ಮಗಳನ್ನು ಕೊಲೆ ಮಾಡಿಸಿದ ತಾಯಿ, ಏನೂ ಅರಿಯದವಳಂತೆ ನಟಿಸಿದ್ದು, ಸಂಬಂಧಿಕರ ಜೊತೆ ಮಗಳನ್ನು ಹುಡುಕುವ ನಾಟಕವಾಡಿದ್ದಾಳೆ. ರಾತ್ರಿ 10 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಸಿಕ್ಕಿ ಹುಡುಕಾಟ ಆರಂಭವಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಹುಡುಕಿದಾಗ ಕತ್ತು ಸೀಳಿರುವ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆಯಾಗಿದೆ. 

ನೆರೆಹೊರೆಯವರು ಮಹಿಳೆ ಮತ್ತು ಸುಧೀರ್ ನಡುವೆ ಅಕ್ರಮ ಸಂಬಂಧ ಇರುವ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮಹಿಳೆಯನ್ನು ಪ್ರಶ್ನಿಸಿದಾಗ, ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

ಮಹಿಳೆಯನ್ನು ಹಾಗೂ ಸುಧೀರ್‌ನನ್ನು ಪೊಲೀಸರ ಬಂಧಿಸಿದ್ದಾರೆ. ಮಹಿಳೆಗೆ ಇನ್ನಿಬ್ಬರು ಗಂಡು ಮಕ್ಕಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments