Webdunia - Bharat's app for daily news and videos

Install App

ಮತ್ತೆ ಕೊಳವೆ ಬಾವಿ ದುರಂತ: ಅಸು ನೀಗಿದ 14 ತಿಂಗಳ ಬಾಲಕ

Webdunia
ಶುಕ್ರವಾರ, 19 ಡಿಸೆಂಬರ್ 2014 (09:44 IST)
ಮಧ್ಯಪ್ರದೇಶದ ಛತ್ತರಪುರದ ಲಿಧೋರಾ ಗ್ರಾಮದಲ್ಲಿ 14 ತಿಂಗಳಿನ ಬಾಳಕ ಕೃಷ್ಣ ಲೋಧಿ ಎಂಬ ಬಾಲಕ ತೆರೆದ ಕೊಳವೆ ಬಾವಿಯಲ್ಲಿ ಬಿದ್ದು ಅಸು ನೀಗಿದ್ದಾನೆ.
ಬುಧವಾರ ಸಂಜೆ ತನ್ನ ಅತ್ತೆಯ ಜತೆ ಹೊಲಕ್ಕೆ ಹೋಗಿದ್ದ ಬಾಲಕ ಕೃಷ್ಣ, ಆಕೆ ಗಿಡಗಳಿಂದ ತರಕಾರಿಗಳನ್ನು ಆಯ್ದುಕೊಳ್ಳುತ್ತಿದ್ದಾಗ  ಅಲ್ಲೇ ಸಮೀಪ ಆಟವಾಡುತ್ತ ಕುಳಿತಿದ್ದ. ಸ್ವಲ್ಪ ಮುಂದೆ ನಡೆದು ಹೋದ ಆತ ಅಲ್ಲೇ ಇದ್ದ ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿದ್ದಾನೆ. ದಮ್ಮು ಆದಿವಾಸಿ ಎಂಬುವವರಿಗೆ ಸೇರಿದ ಹೊಲದಲ್ಲಿ ಕೆಲ ದಿನಗಳ ಹಿಂದೆ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. 
 
ಮಗು ಅತ್ತಾಗ ಅತ್ತೆಗೆ ಆತ ಕೊಳವೆ ಬಾವಿಯಲ್ಲಿ ಬಿದ್ದಿರುವುದು ಅರಿವಾಗಿದೆ. ತಕ್ಷಣ ಕುಟುಂಬದ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ಆಕೆ  ಮಾಹಿತಿ ನೀಡಿದ್ದಾಳೆ.
 
ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಜಿಲ್ಲಾಡಳಿತ ಕಾರ್ಯಾಚರಣೆಯನ್ನು ನಡೆಸಿದ್ದರು. ಆದರೆ 100 ಅಡಿ ಆಳದಲ್ಲಿ ಬಿದ್ದಿದ್ದ ಬಾಲಕನ ರಕ್ಷಣೆಗೆ ನಡೆಸಿದ ಸರ್ವ ಪ್ರಯತ್ನಗಳು ವಿಫಲವಾದವು. ಗುರುವಾರ ರಾತ್ರಿ 8.50ಕ್ಕೆ ಆತನನ್ನು ಹೊರ ತೆಗೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ,ಆದರೆ ಬಾಲಕ ಬದುಕುಳಿದಿಲ್ಲ ಎಂದು ವೈದ್ಯರು ಘೋಷಿಸಿದರು.
 
ಇತ್ತೀಚಿನ ದಿನಗಳಲ್ಲಿ ಮಕ್ಕಳು ತೆರೆದ ಕೊಳವೆ ಬಾವಿಗೆ ಬೀಳುವ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದು ಜನರ ಬೇಜವಾಬ್ದಾರಿತನ ಮಾತ್ರ ಹಾಗೆಯೇ ಮುಂದುವರೆದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments