Webdunia - Bharat's app for daily news and videos

Install App

ಪಕ್ಷದ ವಿರುದ್ಧವೇ ಬಾಂಬ್ ಹಾಕಿದ ಬಿಜೆಪಿ ನಾಯಕ: ವ್ಯಾಪಂ ಹಗರಣಕ್ಕೆ ಪಕ್ಷ ಕ್ಷಮೆಯಾಚಿಸಲಿ

Webdunia
ಬುಧವಾರ, 28 ಸೆಪ್ಟಂಬರ್ 2016 (14:20 IST)
ಇಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುವ ಮುನ್ನವೆ ಬಿಜೆಪಿ ಮುಖಂಡರೊಬ್ಬರು, ವ್ಯಾಪಂ ಹಗರಣ ಕುರಿತಂತೆ ಪಕ್ಷ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಂದಕುಮಾರ್ ಸಿಂಗ್ ಚೌಹಾನ್ ಅವರಿಗೆ ಪತ್ರ ಬರೆದಿರುವುದಾಗಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.
 
   
ಬಿಜೆಪಿ ಮುಖಂಡರಾದ ರಾಜೇಶ್ ಭಾದುರಿಯಾ ಸುದ್ದಿಗಾರರೊಂದಿಗೆ ಮಾತನಾಡಿ,  ವ್ಯಾಪಂ ಹಗರಣ ಕುರಿತಂತೆ ಪಕ್ಷ ಕ್ಷಮೆಯಾಚಿಸುವುದು ಸೂಕ್ತ ಎಂದು ಪಕ್ಷದ ರಾಜ್ಯಾಧ್ಯಕ್ಷ ಚೌಹಾನ್ ಅವರಿಗೆ ಸೆಪ್ಟೆಂಬರ್ 21 ರಂದು ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ. 
 
ವ್ಯಾಪಂ ಹಗರಣದಿಂದಾಗಿ ಲಕ್ಷಾಂತರ ಯುವಕರು ಮತ್ತು ಅವರ ಪೋಷಕರು ತುಂಬಾ ತೊಂದರೆಯನ್ನು ಎದುರಿಸಿದ್ದಾರೆ. ಬಿಜೆಪಿ ನೈತಿಕ ಹೊಣೆ ಹೊರುವದಿರಲಿ. ಏನೂ ನಡಿದೇ ಇಲ್ಲ ಎನ್ನುವಂತೆ ವರ್ತಿಸುತ್ತಿರುವುದು ಅತಿ ಹೇಯ ಸಂಗತಿ ಎಂದು ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. 
 
ಜನರಿಗೆ ತೊಂದರೆಯಾಗಿದ್ದಕ್ಕಾಗಿ ನಾವು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ವ್ಯಾಪಂ ಹಗರಣದ ಬಗ್ಗೆ ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
 
ಮಧ್ಯಪ್ರದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ದಲಿತರ ಓಟ್‌ಬ್ಯಾಂಕ್ ಪ್ರಮುಖ ಕಾರಣವಾಗಿದೆ. ಆದರೆ, ಬಿಜೆಪಿ ಸರಕಾರದಲ್ಲಿಯೇ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿರುವುದು ದಲಿತ ಸಮುದಾಯಕ್ಕೆ ಕಳವಳ ಮೂಡಿಸಿದೆ. ದಲಿತರ ಬಗ್ಗೆ ಬಿಜೆಪಿ ತೋರಿಸುತ್ತಿರುವ ಕಾಳಜಿ ನಾಟಕೀಯವೆನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಮುಂಬರುವ ಚುನಾವಣೆಯಲ್ಲಿ ದಲಿತ ಸಮುದಾಯದ ಮುಖಂಡನನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಬೇಕು. ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಜಾರಿಗೊಳಿಸಬೇಕು ಎಂದು ಬಿಜೆಪಿ ಮುಖಂಡ ರಾಜೇಶ್ ಭಾದುರಿಯಾ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments