Webdunia - Bharat's app for daily news and videos

Install App

ಪ್ರಧಾನಿ ಮೋದಿಯ ಕನಸು ನುಚ್ಚುನೂರಾಗಿಸಿದ ಮಧ್ಯಪ್ರದೇಶ ಸಿಎಂ

Webdunia
ಮಂಗಳವಾರ, 24 ಅಕ್ಟೋಬರ್ 2017 (20:23 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಡಿಜಿಟಲ್ ಇಂಡಿಯಾ ಕನಸನ್ನು ಬಿಜೆಪಿ ಸರಕಾರವೇ ಅಧಿಕಾರದಲ್ಲಿರುವ ಮಧ್ಯಪ್ರದೇಶದಲ್ಲಿ ನುಚ್ಚುನೂರಾಗಿದೆ ಎಂದು ಮೂಲಗಳು ತಿಳಿಸಿವೆ.
ನೋಟು ನಿಷೇಧ ಜಾರಿಗೊಳಿಸಿದ ಬಹುತೇಕ ಒಂದು ವರ್ಷದ ನಂತರ ಮಧ್ಯವರ್ತಿಗಳ ಹಾವಳಿಗಳನ್ನು ತಪ್ಪಿಸಲು ಕೃಷಿ ಕ್ಷೇತ್ರದಲ್ಲಿ ನಗದು ಹಣ ವರ್ಗಾವಣೆಯನ್ನು ನಿಷೇಧಿಸಲಾಗಿತ್ತು. ಇದೀಗ, ವ್ಯಾಪಾರಿಗಳು ಕೃಷಿಕರ ಉತ್ಪನ್ನಗಳಿಗೆ 50 ಸಾವಿರ ರೂಪಾಯಿಗಳವರೆಗೆ ನಗದು ಹಣದ ವಹಿವಾಟು ನಡೆಸಬಹುದು ಎಂದು ಘೋಷಿಸಿ ಮೋದಿ ಕನಸಿಗೆ ಧಕ್ಕೆ ತಂದಿದ್ದಾರೆ.
 
ರೈತರಿಗೆ ಒಂದೇ ದಿನದಲ್ಲಿ ಎಷ್ಟು ಬೇಕಾದರೂ ಹಣವನ್ನು ಪಾವತಿಸಬಹುದು ಯಾವುದೇ ಮಿತಿ ಇಲ್ಲ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾನ್ ತಿಳಿಸಿದ್ದಾರೆ.
 
ರೈತರಿಂದ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ನಮ್ಮದು ರೈತ ಪರ ಸರಕಾರವಾಗಿದ್ದರಿಂದ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು 50 ಸಾವಿರ ರೂಪಾಯಿಗಳವರೆಗೆ ನಗದು ವಹಿವಾಟಿಗೆ ಆದೇಶ ನೀಡಲಾಗಿದೆ. ಉಳಿದ ಹಣವನ್ನು ಚೆಕ್ ಮುಖಾಂತರವಾಗಲಿ ಅಥವಾ ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಬಹುದಾಗಿದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾನ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. 
 
ಕೋಪಗೊಂಡ ರೈತರನ್ನು ಶಮನಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ, ಆದರೆ ವ್ಯಾಪಾರಿಗಳು ಸಿಎಂ ಚೌಹಾನ್  ಆದೇಶವನ್ನು ಧಿಕ್ಕರಿಸಿ, ಸೋಯಾಬೀನ್ ಬೆಳೆದ ರೈತರಿಗೆ ನಗದು ಹಣ ಕೊಡಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments