Webdunia - Bharat's app for daily news and videos

Install App

ರಾಜೀನಾಮೆ ಕೊಡುತ್ತೇನೆಂದು ರಾಜ್ಯಸಭೆಯಿಂದ ಹೊರನಡೆದ ಮಾಯಾವತಿ

Webdunia
ಮಂಗಳವಾರ, 18 ಜುಲೈ 2017 (12:32 IST)
ಗೋರಕ್ಷಣೆ ನೆಪದಲ್ಲಿ ದಲಿತರ ಮೇಲಿನ ದೌರ್ಜನ್ಯ ಕುರಿತಂತೆ ಮಾತನಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕೋಪಗೊಂಡ ರಾಜ್ಯಸಭಾ ಸದಸ್ಯೆ ಮಾಯಾವತಿ ರಾಜೀನಾಮೆ ನೀಡುವುದಾಗಿ ರಾಜ್ಯಸಭೆಯಿಂದ ಹೊರಗೆ ಹೋದ ಘಟನೆ ನಡೆದಿದೆ.
 

ಗೋರಕ್ಷಣೆ ಹೆಸರಲ್ಲಿ ದಲಿತರ ಮೇಲೆ ಹಲ್ಲೆ, ಹತ್ಯೆಯಂತಹ ದೌರ್ಜನ್ಯಗ:ು ನಡೆಯುತ್ತಿವೆ ಎಂದು ಮಾಯಾವತಿ ಮಾತನಾಡಲು ನಿಂತಾಗ ಆಡಳಿತ ಪಕ್ಷದಿಂದ ವಿರೋಧ ವ್ಯಕ್ತವಾಗಿದೆ. ಇದರಿಂದ ಕೋಪಗೊಂಡ ಮಾಯಾವತಿ,
ನನಗೆ ಮಾತನಾಡಲು ಈಗ ಅವಕಾಶ ನೀಡದಿದ್ದರೆ ಈಗಲೇ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಹೇಳಿ ಹೊರಟು ಹೋಗಿದ್ಧಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಮಾಯಾವತಿ ಕೂಡಲೇ ಕ್ಷಮೆ ಕೇಳಬೇಕು. ಸವಾಲು ಹಾಕುವ ಮೂಲಕ ಕಲಾಪಕ್ಕೆ ಅಗೌರವ ತೋರಿದ್ದಾರೆಂದು ಆರೋಪಿಸಿದ್ಧಾರೆ.

ಮಾಯಾವತಿ ಎತ್ತಿದ ವಿಷಯ ಮೌಲ್ಯಯುತ ಮತ್ತು ಗಂಭೀರವಾದದ್ದು. ಲೆ ದೌರ್ಜನ್ಯ ನಡೆಯುತ್ತಿದ್ದರೂ ಈ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ದಲಿತರು ಮತ್ತು ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ ಎಂದು ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments