Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ರಾಮಭಕ್ತರಿಗೆ ಮೃಷ್ಟಾನ್ನ ಭೋಜನ

geetha
ಶುಕ್ರವಾರ, 26 ಜನವರಿ 2024 (21:00 IST)
ಅಯೋಧ್ಯೆ :ಇಸ್ಕಾನ್‌, ಮಹಾವೀರ್‌ ಟೆಂಪಲ್‌ ಟ್ರಸ್ಟ್‌ ಹಾಗೂ  ನಿಹಾಂಗ್‌ ಸಿಖ್ಸ್‌  ಸಂಸ್ಥೆಗಳ ಸಹಯೋಗದಲ್ಲಿ ಈ ಉಚಿತ ಭೋಜನ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇದು ದಿನದ 24 ತಾಸು ಎಡೆಬಿಡದೇ ಕಾರ್ಯ ನಿರ್ವಹಿಸಲಿದೆ. ರಾಮಮಂದಿರ ಉದ್ಘಾಟನೆಗೊಂಡ ದಿನದಿಂದ ದಿನೇದಿನೇ ಭಕ್ತಾದಿಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಸಾಗಿದೆ. ಅಯೋಧ್ಯೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಿಂಡಿ ತೀರ್ಥಗಳ ಬೆಲೆ ಗಗನಕ್ಕೆ ಮುಟ್ಟಿದೆ.

ಈ ಹಿನ್ನೆಲೆಯಲ್ಲಿ ರಾಮಭಕ್ತರ ಹಸಿವು ತಣಿಸಲು ಉಚಿತ ಭೋಜನ ಪೂರೈಸುವ ಅರವಟ್ಟಿಗೆಗಳನ್ನು ತೆರೆಯಲಾಗಿದೆ. ಭಕ್ತಾದಿಗಳಿಗೆ ಕಿಚಡಿ, ಪೂರಿ, ಕಡಿ ಚಾವಲ್‌, ಉಪ್ಪಿನಕಾಯಿ, ಹಪ್ಪಳಗಳನ್ನು ಒದಗಿಸಲಾಗುತ್ತಿದೆ. ಜೊತೆಗೆ ಅಯೋಧ್ಯೆಯಲ್ಲಿ ವಿಪರೀತ ಚಳಿ ಇರುವುದರಿಂದ ಬಿಸಿಬಿಸಿ ಚಹಾ ವ್ಯವಸ್ಥೆ ಕೂಡ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments