Webdunia - Bharat's app for daily news and videos

Install App

ಮುಸ್ಲಿಮರಿಗೆ ಮುಲಾಯಂ ಮೋಸ, ಪಾಠ ಕಲಿಸಲು ಸುಸಮಯ: ಶಾಹಿ ಇಮಾಮ್

Webdunia
ಸೋಮವಾರ, 2 ಜನವರಿ 2017 (12:16 IST)
ವಿಧಾನಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಆಂತರಿಕ ಬಿಕ್ಕಟ್ಟಿನಿಂದ ಜರ್ಜರಿತರಾಗಿರುವ ಸಮಾಜವಾದಿ ನಾಯಕ ಮುಲಾಯಂ ಸಿಂಗ್ ಯಾದವ್ ಅವರಿಗೆ  ಜಾಮಾ ಮಸೀದಿಯ ಶಾಹಿ ಇಮಾಮ್, ಸೈಯ್ಯದ್ ಇಮಾಮ್ ಬುಕಾರಿ ಸಹ ಶಾಕ್ ನೀಡಿದ್ದಾರೆ. ಮುಸ್ಲಿಂ ಸಮುದಾಯದವರೆಲ್ಲ ಒಂದಾಗಿ ನಮಗೆ ಮೋಸ ಮಾಡಿರುವ ಮುಲಾಯಂ ಸಿಂಗ್ ಯಾದವ್ ಅವರಿಗೆ ತಕ್ಕ ಪಾಠ ಕಲಿಸಬೇಕಾಗಿ ಅವರು ಕರೆ ನೀಡಿದ್ದಾರೆ. 
 
2012ರ ಚುನಾವಣಾ ಪ್ರಣಾಲಿಕೆಯಲ್ಲಿ ಮುಸ್ಲಿಂ ಸಮುದಾಯ ಎದುರಿಸುತ್ತಿದ್ದ ಸಮಸ್ಯೆಗಳ ಪರಿಹಾರಕ್ಕೆ ಕೆಲಸ ಮಾಡುತ್ತೇವೆ. ಸಮುದಾಯಕ್ಕೆ 18% ಮೀಸಲಾತಿ ನೀಡುತ್ತೇವೆ, ಎಂಬ ಮುಲಾಯಂ ವಾಗ್ದಾನ ಮಾಡಿದ್ದರು. ಆದರೆ ಅವರು ತಮ್ಮ ಮಾತನ್ನು ಮೀರಿದ್ದಾರೆ. ಇದು ಅವರಿಗೆ ಪಾಠ ಕಲಿಸಲು ಸರಿಯಾದ ಸಮಯ ಎಂದು ಬುಕಾರಿ ಹೇಳಿದ್ದಾರೆ. 
 
ಸಮಾಜವಾದಿ ಪಕ್ಷ ಆಡಳಿತಕ್ಕೆ ಬಂದ ಒಂದು ವರ್ಷದಲ್ಲಿಯೇ 113 ಕೋಮು ಗಲಭೆಗಳು ನಡೆದವು. 13 ಪ್ರದೇಶಗಳಲ್ಲಿ ಕರ್ಫ್ಯೂವನ್ನು ಹೇರಲಾಯ್ತು. ಆಡಳಿತದಲ್ಲೂ ಇಸ್ಲಾಂ ಸಮುದಾಯದವರಿಗೆ ಸಾಕಷ್ಟು ಅವಕಾಶ ನೀಡಲಾಗಿಲ್ಲ ಎಂದು ಬುಕಾರಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 
 
2012ರ ವಿಧಾನಸಭಾ ಚುನಾವಣೆಯಲ್ಲಿ ಬುಕಾರಿ ಮುಲಾಯಂ ಸಿಂಗ್ ನೇತೃತ್ವದ ಸಮಾಜವಾದಿ ಪಕ್ಷಕ್ಕೆ ಬೆಂಬಲ ಘೋಷಿಸಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments