Webdunia - Bharat's app for daily news and videos

Install App

ಮಗನಿಗಾಗಿ ತಮ್ಮನನ್ನು ಬಲಿ ನೀಡಿದ ಮುಲಾಯಂ

Webdunia
ಶನಿವಾರ, 21 ಜನವರಿ 2017 (13:33 IST)
ಕೌಟುಂಬಿಕ ಕಲಹದಿಂದ ಜರ್ಜರಿತವಾಗಿರುವ ಯಾದವ್ ಪರಿವಾರದವರ ಮೇಲೆ ಗಾಯದ ಮೇಲೆ ಬರೆ ಎಳೆದಂತೆ ತೀವ್ರ ವಾಗ್ದಾಳಿ ನಡೆಸಿರುವ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ, ಮಗನಿಗಾಗಿ ಮುಲಾಯಂ ತಮ್ಮನನ್ನು ಬಲಿ ನೀಡಿದ್ದಾರೆ ಎಂದು ಕಿಚಾಯಿಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದ ಮಾಯಾವತಿ, ಯಾದವ್ ಕುಟುಂಬದ ಮೇಲೆ ಮನಬಂದಂತೆ ಹರಿಹಾಯ್ದರು. 
 
ಅಖಿಲೇಶ್ ಮತ್ತು ಮುಲಾಯಂ ಬಣದ ನಡುವೆ ನಡೆದ ಕದನ, ಸರ್ಕಾರದ ಆಡಳಿತ ವೈಫಲ್ಯದೆಡೆಗಿನ ಗಮನವನ್ನು ಬೇರೆಡೆ ಸೆಳೆಯಲು ಪಕ್ಷದ ಸ್ಥಾಪಕ  (ಮುಲಾಯಂ) ಅವರ ಸಾರಥ್ಯದಲ್ಲಿ ನಡೆದ ಪೂರ್ವಯೋಜಿತ ನಾಟಕ ಎಂದು ಅವರು ವ್ಯಾಖ್ಯಾನಿಸಿದರು. 
 
ತಮ್ಮ ಸಾರ್ವಜನಿಕ ಸಭೆ ಮತ್ತು ರ‍್ಯಾಲಿಗಳಲ್ಲಿ ಸಮಾಜವಾದಿ ಪಕ್ಷದ ವಿಭಜನೆಯನ್ನು ಹೈಲೈಟ್ ಮಾಡುತ್ತಿರುವ ಮಾಯಾವತಿ ಮತದಾರರು 2017ರ ವಿಧಾನಸಭಾ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಆಡಳಿತಕ್ಕೆ ಸೋಲುಣಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. 
 
ಎಸ್‌ಪಿ ಜತೆ ಮೈತ್ರಿ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ವಿರುದ್ಧವೂ ಗುಡುಗಿದ ಅವರು, ಕಾಂಗ್ರೆಸ್ ಬಹಳ ಹೀನಾಯ ಸ್ಥಿತಿಯಲ್ಲಿದ್ದು ತನ್ನದೇ ಆದ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸ್ಥಿತಿಯಲ್ಲಿ ಅದಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments