Webdunia - Bharat's app for daily news and videos

Install App

ಪುತ್ರನನ್ನು ಸೈಡ್‌ಗಿಟ್ಟು ಸಹೋದರ ಪ್ರೇಮ ಮೆರೆದ ಮುಲಾಯಂ

Webdunia
ಸೋಮವಾರ, 24 ಅಕ್ಟೋಬರ್ 2016 (12:48 IST)
ಪಕ್ಷದಲ್ಲಿ ಎದ್ದಿರುವ ಭಿನ್ನಮತವನ್ನು ಶಮನಗೊಳಿಸಲು ಇಂದು ಲಕ್ನೋನಲ್ಲಿ ನಡೆಸಿದ ಪಕ್ಷದ ವರಿಷ್ಠರ ಸಭೆಯಲ್ಲಿ ಸಮಾಜವಾದಿ ನಾಯಕ ಮುಲಾಯಂ ಸಿಂಗ್ ಯಾದವ್ ತಮ್ಮ ಮಗನನ್ನು ಬದಿಗಿಟ್ಟು ಪಕ್ಷವನ್ನು ಕಟ್ಟುವಾಗ ತಮಗೆ ಹೆಗಲಾಗಿದ್ದ ಸಹೋದರ ಶಿವಪಾಲ್ ಸಿಂಗ್ ಮತ್ತು ಪಕ್ಷದ ಮತ್ತೊಬ್ಬ ವರಿಷ್ಠ ಅಮರ್ ಸಿಂಗ್ ಪರವಾಗಿ ನಿಂತಿದ್ದಾರೆ.

ಬದಲಾವಣೆ ತರುವವರನ್ನು ಮುಂದಕ್ಕೆ ಕರೆದುಕೊಂಡು ಬಂದೆ. ಅಧಿಕಾರ ಸಿಗುತ್ತಲೇ ನಿಮ್ಮ ತಲೆ ಕೆಟ್ಟು ಹೋಗಿದೆ. ಕೆಲ ನಾಯಕರಿಗೆ ಮೂಗು ತೂರಿಸುವದಷ್ಟೇ ಕೆಲಸ. ಕಿರುಚಾಡೋರನ್ನ ಪಕ್ಷದಿಂದ ಹೊರಕ್ಕೆ ಹಾಕ್ತಿನಿ ಎಂದು ಮುಲಾಯಂ ಗುಡುಗಿದ್ದು, ಎಲ್ಲು ಕೂಡ ಮಗನ ಹೆಸರನ್ನು ಪ್ರಸ್ತಾಪಿಸದೇ ಮಗ ಪಕ್ಷ ಬಿಟ್ಟು ಹೋದರೂ ಚಿಂತೆ ಇಲ್ಲ ಎನ್ನುವ ಇಂಗಿತವನ್ನು ಹೊರಹಾಕಿದ್ದಾರೆ.
 
ಪಕ್ಷ ಕಟ್ಟುವಾಗ ನಾನು ಸಹೋದರನ ಜತೆಗಿದ್ದೆ. ತುರ್ತು ಪರಿಸ್ಥಿತಿಯಲ್ಲಿ  ಮುಲಾಯಂ ಜೈಲಿಗೆ ಹೋದಾಗ ನಾನು ಪಕ್ಷವನ್ನು ನಿಭಾಯಿಸಿದ್ದೇನೆ. ಆದರೆ ನನ್ನಿಂದ ಅಧಿಕಾರವನ್ನು ಕಸಿಯಲಾಯ್ತು. ನನ್ನದೇನು ತಪ್ಪಿತ್ತು, ಇದೆಲ್ಲ ನನಗೆ ದುಃಖ ತಂದಿದೆ ಎಂದು ಮುಲಾಯಂ ಸಹೋದರ ಶಿವಪಾಲ್ ಸಿಂಗ್ ತಮ್ಮ ನೋವನ್ನು ಹೊರಹಾಕಿದ್ದಾರೆ. 
 
ಗಂಗಾಜಲ ಮುಟ್ಟಿ ಪ್ರಮಾಣ ಮಾಡುತ್ತೇನೆ ಅಖಿಲೇಶ್ ಯಾದವ್ ಹೊಸ ಪಕ್ಷ ಕಟ್ಟಲು, ವಿರೋಧಪಕ್ಷದವರ ಜತೆ ಮೈತ್ರಿ ಮಾಡಿಕೊಳ್ಳಲು ತಯಾರಾಗಿದ್ದರು ಎಂದು ಗುಡುಗಿರುವ ಶಿವಪಾಲ್, ಪಕ್ಷವನ್ನು ಉಳಿಸಿಕೊಳ್ಳಲು ಯಾವ ತ್ಯಾಗಕ್ಕೂ ಸಿದ್ಧ ಎಂದಿದ್ದಾರೆ. 
 
ಅಮರ್ ಸಿಂಗ್ ಪರವೂ ವಾದಿಸಿದ ಮುಲಾಯಂ, ಸಿಂಗ್ ಇಲ್ಲದಿದ್ದರೆ ನಾನು ಜೈಲು ಸೇರುತ್ತಿದ್ದೆ. ನನ್ನನ್ನು ರಕ್ಷಿಸಿದ ಅವರ ಬಗ್ಗೆ ನೀನು ಮಾತನಾಡುತ್ತೀಯಾ? ಆತ ನನ್ನ ಸಹೋದರನಿದ್ದಂತೆ ಎಂದು ಬಹಿರಂಗವಾಗಿಯೇ ತಮ್ಮ ಪುತ್ರನ ವಿರುದ್ಧ ಹರಿಹಾಯ್ದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments