Webdunia - Bharat's app for daily news and videos

Install App

ರೈಲು ದುರಂತ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Webdunia
ಶನಿವಾರ, 30 ಸೆಪ್ಟಂಬರ್ 2017 (15:44 IST)
ಪದೇ ಪದೇ ಸಂಭವಿಸುತ್ತಿರುವ ರೈಲು ದುರಂತದ ಬಗ್ಗೆ ಪ್ರಮುಖ ವಿಪಕ್ಷವಾದ ಕಾಂಗ್ರೆಸ್ ಪ್ರಧಾನಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ದುರಂತ ಸಂಭವಿಸಿದ ಕೂಡಲೇ ಸಚಿವರನ್ನು ಬದಲಾಯಿಸುವುದು ಸರಿಯಲ್ಲಿ ಇಲಾಖೆಯಲ್ಲಿ ಬದಲಾವಣೆ ತರುವುದು ಅಗತ್ಯವಾಗಿದೆ. ರೈಲ್ವೆ ಇಲಾಖೆಗೆ ಮೂಲಭೂತ ಸೌಕರ್ಯ ಒದಗಿಸುವುದು ಅಗತ್ಯವಾಗಿದೆ ಎಂದು ತಿರುಗೇಟು ನೀಡಿದೆ.
 
ರೈಲ್ವೆ ಇಲಾಖೆಯನ್ನು ಸಂಪೂರ್ಣವಾಗಿ ಆಧುನೀಕರಣಗೊಳಿಸುವುದು ಅಗತ್ಯವಾಗಿದೆ. ದೇಶದಲ್ಲಿ ರೈಲ್ವೆ ಇಲಾಖೆ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದರೂ ಕೇಂದ್ರ ಸರಕಾರ ಬುಲೆಟ್ ರೈಲು ತರುವ ಬಗ್ಗೆ ಚಿಂತನೆ ನಡೆಸಿದೆ ಎಂದು ಕಾಂಗ್ರೆಸ್ ಸಂಸದೆ ,ಸುಶ್ಮಿತಾ ದೇವಿ ಕಿಡಿಕಾರಿದ್ದಾರೆ.
 
ಸರಣಿ ರೈಲ್ವೆ ಅಪಘಾತಗಳು ನಡೆದರೂ ಕ್ಯಾರೆ ಎನ್ನದ ಪ್ರಧಾನಿ ಕೇವಲ ಸಚಿವ ಸುರೇಶ್ ಪ್ರಭು ಅವರನ್ನು ಎತ್ತಂಗಡಿ ಮಾಡಿ ಪಿಯೂಷ್ ಗೋಯಲ್‌ಗೆ ರೈಲ್ವೆ ಸಚಿವರಾಗಿ ನೇಮಕ ಮಾಡಿದರು. ಆದರೆ, ನಿರಂತರವಾಗಿ ಅಪಘಾತಗಳು ಮುಂದುವರಿದಿವೆ ಅದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.
 
ಟಿಕೆಟ್ ದರವನ್ನು ನಿರಂತರವಾಗಿ ಹೆಚ್ಚಿಸುತ್ತಿರುವ ಕೇಂದ್ರ ಸರಕಾರ ರೈಲ್ವೆ ಪ್ರಯಾಣಿಕರಿಗೆ ಸುರಕ್ಷತೆಯನ್ನು ನೀಡುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments