Webdunia - Bharat's app for daily news and videos

Install App

ರೈಲು ದುರಂತ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Webdunia
ಶನಿವಾರ, 30 ಸೆಪ್ಟಂಬರ್ 2017 (15:44 IST)
ಪದೇ ಪದೇ ಸಂಭವಿಸುತ್ತಿರುವ ರೈಲು ದುರಂತದ ಬಗ್ಗೆ ಪ್ರಮುಖ ವಿಪಕ್ಷವಾದ ಕಾಂಗ್ರೆಸ್ ಪ್ರಧಾನಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ದುರಂತ ಸಂಭವಿಸಿದ ಕೂಡಲೇ ಸಚಿವರನ್ನು ಬದಲಾಯಿಸುವುದು ಸರಿಯಲ್ಲಿ ಇಲಾಖೆಯಲ್ಲಿ ಬದಲಾವಣೆ ತರುವುದು ಅಗತ್ಯವಾಗಿದೆ. ರೈಲ್ವೆ ಇಲಾಖೆಗೆ ಮೂಲಭೂತ ಸೌಕರ್ಯ ಒದಗಿಸುವುದು ಅಗತ್ಯವಾಗಿದೆ ಎಂದು ತಿರುಗೇಟು ನೀಡಿದೆ.
 
ರೈಲ್ವೆ ಇಲಾಖೆಯನ್ನು ಸಂಪೂರ್ಣವಾಗಿ ಆಧುನೀಕರಣಗೊಳಿಸುವುದು ಅಗತ್ಯವಾಗಿದೆ. ದೇಶದಲ್ಲಿ ರೈಲ್ವೆ ಇಲಾಖೆ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದರೂ ಕೇಂದ್ರ ಸರಕಾರ ಬುಲೆಟ್ ರೈಲು ತರುವ ಬಗ್ಗೆ ಚಿಂತನೆ ನಡೆಸಿದೆ ಎಂದು ಕಾಂಗ್ರೆಸ್ ಸಂಸದೆ ,ಸುಶ್ಮಿತಾ ದೇವಿ ಕಿಡಿಕಾರಿದ್ದಾರೆ.
 
ಸರಣಿ ರೈಲ್ವೆ ಅಪಘಾತಗಳು ನಡೆದರೂ ಕ್ಯಾರೆ ಎನ್ನದ ಪ್ರಧಾನಿ ಕೇವಲ ಸಚಿವ ಸುರೇಶ್ ಪ್ರಭು ಅವರನ್ನು ಎತ್ತಂಗಡಿ ಮಾಡಿ ಪಿಯೂಷ್ ಗೋಯಲ್‌ಗೆ ರೈಲ್ವೆ ಸಚಿವರಾಗಿ ನೇಮಕ ಮಾಡಿದರು. ಆದರೆ, ನಿರಂತರವಾಗಿ ಅಪಘಾತಗಳು ಮುಂದುವರಿದಿವೆ ಅದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.
 
ಟಿಕೆಟ್ ದರವನ್ನು ನಿರಂತರವಾಗಿ ಹೆಚ್ಚಿಸುತ್ತಿರುವ ಕೇಂದ್ರ ಸರಕಾರ ರೈಲ್ವೆ ಪ್ರಯಾಣಿಕರಿಗೆ ಸುರಕ್ಷತೆಯನ್ನು ನೀಡುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments