Select Your Language

Notifications

webdunia
webdunia
webdunia
webdunia

ರಾಜ್ ಠಾಕ್ರೆ ವಿರುದ್ಧ ಟೀಕೆ: ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿದ ಎಂಎನ್‌ಎಸ್ ಕಾರ್ಯಕರ್ತರು

ರಾಜ್ ಠಾಕ್ರೆ ವಿರುದ್ಧ ಟೀಕೆ: ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿದ ಎಂಎನ್‌ಎಸ್ ಕಾರ್ಯಕರ್ತರು
ಮುಂಬೈ , ಶುಕ್ರವಾರ, 26 ಜೂನ್ 2015 (19:10 IST)
ಬಿಜೆಪಿ ಶಾಸಕ ರಾಜ್ ಪುರೋಹಿತ್, ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆಯನ್ನು ಟೀಕಿಸಿದ ಹಿನ್ನೆಲೆಯಲ್ಲಿ ಕಲ್ಬಾದೇವಿ ಪ್ರದೇಶದಲ್ಲಿರುವ ಬಿಜೆಪಿ ಕಚೇರಿಯನ್ನು ಎಂಎನ್ಎಸ್ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. 
 
ಕೋಲಬಾ ಕ್ಷೇತ್ರದ ಬಿಜೆಪಿ ಶಾಸಕ ರಾಜ್ ಪುರೋಹಿತ್,  ಎಂಎನ್‌ಎಸ್ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಲ್ಲದೇ ರಾಜ್ ಠಾ ಕ್ರೆ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿರುವುದು ಎಂಎನ್‌ಎಸ್ ಕಾರ್ಯಕರ್ತರನ್ನು ಕೆರಳಿಸಿದೆ.  
 
ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಬೋಗಸ್ ನಾಯಕ ಎಂದು ಶಾಸಕ ಪುರೋಹಿತ್ ನೀಡಿರುವ ಹೇಳಿಕೆ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಎಂಎನ್ಎಸ್ ಕಾರ್ಯಕರ್ತರು ರಸ್ತೆಗಿಳಿದು ಘೋಷಣೆಗಳನ್ನು ಕೂಗಿದ್ದಾರೆ.  
 
ಕಲಬಾದೇವಿ ಬಿಜೆಪಿ ಕಚೇರಿಗೆ ನುಗ್ಗಿದ ಕಾರ್ಯಕರ್ತರು ಕಚೇರಿಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿ, ಬಿಜೆಪಿ ಶಾಸಕ ಪುರೋಹಿತ್ ಧಿಕ್ಕಾರಗಳನ್ನು ಕೂಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 

Share this Story:

Follow Webdunia kannada