Webdunia - Bharat's app for daily news and videos

Install App

ಮುಂಬೈ ದಾಳಿಕೋರ ರಾಣಾಗೆ ಭಾರತದಲ್ಲಿ ಭರ್ಜರಿ ಭದ್ರತೆ: ಆತನಿಗಾಗಿ ಏನೆಲ್ಲಾ ಸಿದ್ಧತೆಯಾಗಿದೆ ನೋಡಿ

Krishnaveni K
ಗುರುವಾರ, 10 ಏಪ್ರಿಲ್ 2025 (15:06 IST)
Photo Credit: X
ನವದೆಹಲಿ: ಮುಂಬೈ ದಾಳಿ ಮಾಸ್ಟರ್ ಮೈಂಡ್ ರಾಣಾ ಕೆಲವೇ ಕ್ಷಣಗಳಲ್ಲಿ ಭಾರತಕ್ಕೆ ಬಂದಿಳಿಯಲಿದ್ದು, ಆತನ ಭದ್ರತೆಗೆ ಭದ್ರತಾ ಸಿಬ್ಬಂದಿ ಭರ್ಜರಿ ಏರ್ಪಾಟು ಮಾಡಿದ್ದಾರೆ.

2008 ರಲ್ಲಿ ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ತಹವ್ವೂರ್ ರಾಣಾ ಅಮೆರಿಕಾದಿಂದ ಗಡೀಪಾರಾಗಿದ್ದು ಭಾರತಕ್ಕೆ ಬರುತ್ತಿದ್ದಾನೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಆತ ದೆಹಲಿಯ ಪಾಲಂ ಏರ್ ಬೇಸ್ ನಲ್ಲಿ ಬಂದಿಳಿಯಲಿದ್ದಾನೆ.

ಈತನನ್ನು ಬಿಗಿ ಭದ್ರತೆಯಲ್ಲಿ ಕರೆತರಲು ಎನ್ ಐಎ ಅಧಿಕಾರಿಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಏರ್ ಬೇಸ್ ಗೆ ಬಂದಿಳಿದ ತಕ್ಷಣ ಆತನನ್ನು ಕರೆದೊಯ್ಯಲು ವಿಶೇಷ ಬುಲೆಟ್ ಪ್ರೂಫ್ ವಾಹನ ರೆಡಿಯಾಗಿದೆ. ಈ ವಾಹನ ಬಾಂಬ್ ಬಿದ್ದರೂ ಅಲ್ಲಾಡಲ್ಲ.

ಇಲ್ಲಿಂದ ಆತನನ್ನು ಸೀದಾ ಎನ್ಐಎ ಕಚೇರಿಗೆ ಕೊಂಡೊಯ್ಯುವ ಸಾಧ್ಯತೆಯಿದೆ. 17 ವರ್ಷಗಳ ಬಳಿಕ ರಾಣಾನನ್ನು ಎನ್ಐಎ ವಶಕ್ಕೆ ಪಡೆದುಕೊಂಡಿದೆ. ಈತನನ್ನು ಬಿಗಿ ಭದ್ರತೆಯಲ್ಲಿ ವಿಚಾರಣೆಗಾಗಿ ಕರೆದೊಯ್ಯಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments