Webdunia - Bharat's app for daily news and videos

Install App

ಮುಂಬೈ ದಾಳಿಕೋರ ರಾಣಾಗೆ ಭಾರತದಲ್ಲಿ ಭರ್ಜರಿ ಭದ್ರತೆ: ಆತನಿಗಾಗಿ ಏನೆಲ್ಲಾ ಸಿದ್ಧತೆಯಾಗಿದೆ ನೋಡಿ

Krishnaveni K
ಗುರುವಾರ, 10 ಏಪ್ರಿಲ್ 2025 (15:06 IST)
Photo Credit: X
ನವದೆಹಲಿ: ಮುಂಬೈ ದಾಳಿ ಮಾಸ್ಟರ್ ಮೈಂಡ್ ರಾಣಾ ಕೆಲವೇ ಕ್ಷಣಗಳಲ್ಲಿ ಭಾರತಕ್ಕೆ ಬಂದಿಳಿಯಲಿದ್ದು, ಆತನ ಭದ್ರತೆಗೆ ಭದ್ರತಾ ಸಿಬ್ಬಂದಿ ಭರ್ಜರಿ ಏರ್ಪಾಟು ಮಾಡಿದ್ದಾರೆ.

2008 ರಲ್ಲಿ ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ತಹವ್ವೂರ್ ರಾಣಾ ಅಮೆರಿಕಾದಿಂದ ಗಡೀಪಾರಾಗಿದ್ದು ಭಾರತಕ್ಕೆ ಬರುತ್ತಿದ್ದಾನೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಆತ ದೆಹಲಿಯ ಪಾಲಂ ಏರ್ ಬೇಸ್ ನಲ್ಲಿ ಬಂದಿಳಿಯಲಿದ್ದಾನೆ.

ಈತನನ್ನು ಬಿಗಿ ಭದ್ರತೆಯಲ್ಲಿ ಕರೆತರಲು ಎನ್ ಐಎ ಅಧಿಕಾರಿಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಏರ್ ಬೇಸ್ ಗೆ ಬಂದಿಳಿದ ತಕ್ಷಣ ಆತನನ್ನು ಕರೆದೊಯ್ಯಲು ವಿಶೇಷ ಬುಲೆಟ್ ಪ್ರೂಫ್ ವಾಹನ ರೆಡಿಯಾಗಿದೆ. ಈ ವಾಹನ ಬಾಂಬ್ ಬಿದ್ದರೂ ಅಲ್ಲಾಡಲ್ಲ.

ಇಲ್ಲಿಂದ ಆತನನ್ನು ಸೀದಾ ಎನ್ಐಎ ಕಚೇರಿಗೆ ಕೊಂಡೊಯ್ಯುವ ಸಾಧ್ಯತೆಯಿದೆ. 17 ವರ್ಷಗಳ ಬಳಿಕ ರಾಣಾನನ್ನು ಎನ್ಐಎ ವಶಕ್ಕೆ ಪಡೆದುಕೊಂಡಿದೆ. ಈತನನ್ನು ಬಿಗಿ ಭದ್ರತೆಯಲ್ಲಿ ವಿಚಾರಣೆಗಾಗಿ ಕರೆದೊಯ್ಯಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments