Webdunia - Bharat's app for daily news and videos

Install App

ಇಂದು ಮುಸ್ಲಿಂ ಮಂಡಳಿ ಅರ್ಜಿ ವಿಚಾರಣೆ

Webdunia
ಗುರುವಾರ, 26 ಮೇ 2022 (07:23 IST)
ನವದೆಹಲಿ : ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ಕೈಬಿಡುವಂತೆ ಹಾಗೂ ಸಿವಿಲ್ ನ್ಯಾಯಾಲಯ ನಿರ್ದೇಶನ ಮೇರೆಗೆ ನಡೆಸಲಾಗಿರುವ ವಿಡಿಯೋಗ್ರಫಿ ಸರ್ವೆಯನ್ನು ಅನೂರ್ಜಿತಗೊಳಿಸುವಂತೆ,
 
ಮಸೀದಿ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ವಿಚಾರಣೆ ನಡೆಸಲಿದೆ. ನ್ಯಾ. ಅಜಯ್ ಕೃಷ್ಣ ವಿಶ್ವೇಶ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಎರಡು ದಿನಗಳ ಹಿಂದೆ ಮಧ್ಯಂತರ ಆದೇಶ ನೀಡಿದ್ದ ಕೋರ್ಟ್, ಮಸೀದಿ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ಮೊದಲು ವಿಚಾರಣೆ ನಡೆಸುವುದಾಗಿ ತಿಳಿಸಿತ್ತು. 

ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಐದು ಮಂದಿ ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮಸೀದಿ ಆಡಳಿತ ಮಂಡಳಿ 1991 ರ ಪೂಜಾ ಸ್ಥಳಗಳ ನಿರ್ಬಂಧ ಕಾಯಿದೆ ಮತ್ತು ಆದೇಶ 7 ನಿಯಮ 11 ರ ಉಲ್ಲಂಘನೆಯಾಗಿದೆ ಎಂದು ಅರ್ಜಿ ಸಲ್ಲಿಸಿದ್ದರು.

ನಿಯಮಗಳ ಪ್ರಕಾರ ಸ್ವಾತಂತ್ರ್ಯದ ನಂತರ ಧಾರ್ಮಿಕ ಪ್ರದೇಶಗಳ ರಚನೆ ಧಕ್ಕೆ ತರಬಾರದು ಮತ್ತು ಅದು ಇರುವ ಸ್ಥಿತಿಯಲ್ಲಿ ಮುಂದುವರಿಸಬೇಕು. ಆದರೆ ನಿಯಮ ಬಾಹಿರವಾಗಿ ಸಿವಿಲ್ ಕೋರ್ಟ್ ವಿಡಿಯೋ ಸರ್ವೆಗೆ ಅನುಮತಿ ನೀಡಿದೆ. ಹೀಗಾಗಿ ವೀಡಿಯೋ ಸರ್ವೆಯನ್ನು ಪರಿಗಣಿಸಬಾರದು ಮತ್ತು ಪೂಜೆಗೆ ಅವಕಾಶ ಕಲ್ಪಿಸಬಾರದು ಎಂದು ವಾದ ಮಂಡಿಸಿದ್ದರು.

ಅಲ್ಲದೇ ಪ್ರಕರಣದಲ್ಲಿ 1991 ರ ಕಾಯಿದೆ ಅನ್ವಯ ಆಗುವ ಬಗ್ಗೆ ಮೊದಲು ತೀರ್ಮಾನ ಆಗಬೇಕು ಎಂದು ಒತ್ತಾಯಿಸಿದ್ದರು. ಇದಕ್ಕೆ ಒಪ್ಪಿರುವ ಕೋರ್ಟ್ ಇಂದಿನಿಂದ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments