Webdunia - Bharat's app for daily news and videos

Install App

ಜ್ಞಾನವಾಪಿಯಲ್ಲಿ ಹಿಂದೂಗಳ ಪೂಜೆಗೆ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Krishnaveni K
ಶುಕ್ರವಾರ, 2 ಫೆಬ್ರವರಿ 2024 (14:38 IST)
ನವದೆಹಲಿ: ಜ್ಞಾನವಾಪಿಯಲ್ಲಿ ಹಿಂದೂಗಳ ಪೂಜೆಗೆ ನಿರ್ಬಂಧ ಹೇರಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಳ್ಳಿ ಹಾಕಿದೆ.

ಸದ್ಯಕ್ಕೆ ಹಿಂದೂಗಳ ಪೂಜೆಗೆ ನಿರ್ಬಂಧ ವಿಧಿಸಲಾಗದು. ಫೆಬ್ರವರಿ 6 ರವರೆಗೆ ಯಥಾ ಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಕೋರ್ಟ್ ಹೇಳಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಹಿಂದೂಗಳ ಪೂಜೆಗೆ ಅವಕಾಶ ನೀಡಿರುವುದನ್ನು ವಿರೋಧಿಸಿ ಮಸೀದಿ ಸಮಿತಿ ಅರ್ಜಿ ಸಲ್ಲಿಸಿತ್ತು. ಆದರೆ ಈಗ ಮಸೀದಿ ಸಮಿತಿಗೆ ತೀವ್ರ ಹಿನ್ನಡೆಯಾಗಿದೆ.

ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 6 ರಂದು ನಡೆಯಲಿದೆ. ಅಲ್ಲಿಯವರೆಗೆ ಹಿಂದೂಗಳ ಪೂಜೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ಆ ದಿನ ಪುರಾತತ್ವ ಇಲಾಖೆಯ ಸಮೀಕ್ಷಾ ವರದಿಯೂ ವಿಚಾರಣೆಗೆ ಬರಲಿದೆ. ಸದ್ಯಕ್ಕೆ ಉತ್ತರ ಪ್ರದೇಶ ಸರ್ಕಾರವೇ ಈ ವಿವಾದಿತ ಸ್ಥಳದ ಮೇಲುಸ್ತುವಾರಿ ವಹಿಸಲು ಕೋರ್ಟ್ ಸೂಚನೆ ನೀಡಿದೆ.

ಕೋರ್ಟ್ ತೀರ್ಪಿನ ಬೆನ್ನಲ್ಲೇ ಈಗಾಗಲೇ ವಾರಣಾಸಿಯ ನೆಲಮಾಳಿಗೆಯಲ್ಲಿ ಹಿಂದೂಗಳು ಪೂಜೆ ಆರಂಭಿಸಿದ್ದಾರೆ. ಈ ವಿಚಾರವನ್ನೂ ಕೋರ್ಟ್ ಗೆ ಮನವರಿಕೆ ಮಾಡಲಾಗಿದೆ. ಮೊದಲ ದಿನದಿಂದಲೇ ಸಾಕಷ್ಟು ಜನ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಇದೀಗ ಅಲ್ಲಿ ಮಾಡಲಾಗಿರುವ ವ್ಯವಸ್ಥೆಗಳ ಬಗ್ಗೆಯೂ ಉತ್ತರ ಪ್ರದೇಶ ಸರ್ಕಾರದಿಂದ ಕೋರ್ಟ್ ವಿವರಾದ ಮಾಹಿತಿ ಕೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments