Webdunia - Bharat's app for daily news and videos

Install App

ಹಿಂದೂಗಳ ಪ್ರತಿಭಟನೆ ಬಳಿಕ ಮಸೀದಿಯ ಅಕ್ರಮ ಕಟ್ಟಡ ತೆರವುಗೊಳಿಸಲು ಒಪ್ಪಿದ ಮುಸ್ಲಿಂ ಸಮಿತಿ

Krishnaveni K
ಗುರುವಾರ, 12 ಸೆಪ್ಟಂಬರ್ 2024 (17:10 IST)
ಶಿಮ್ಲಾ: ಕೋರ್ಟ್ ಆದೇಶವನ್ನೂ ಧಿಕ್ಕರಿಸಿ ಮಸೀದಿಗೆ ಕಟ್ಟಡ ಕಟ್ಟಿರುವುದನ್ನು ವಿರೋಧಿಸಿ ನಿನ್ನೆ ಶಿಮ್ಲಾದಲ್ಲಿ ಹಿಂದೂಗಳಿಂದ ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಈಗ ಮುಸ್ಲಿಂ ಸಮಿತಿ ಅಕ್ರಮ ಕಟ್ಟಡ ತೆರವುಗೊಳಿಸಲು ಸಮ್ಮತಿಸಿದೆ.

ಇದರೊಂದಿಗೆ ಹಿಮಾಚಲಪ್ರದೇಶದ ಅಕ್ರಮ ಮಸೀದಿ ಕಟ್ಟಡ ವಿವಾದಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಿದೆ. ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಅಕ್ರಮವಾಗಿ ಮಸೀದಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿತ್ತು. ಇದರ ಬಗ್ಗೆ ಆಕ್ರೋಶಗೊಂಡಿದ್ದ ಹಿಂದೂಗಳು ಭಾರೀ ಪ್ರತಿಭಟನೆ ನಡೆಸಿದ್ದರು.

ನಕ್ಷೆಯ ಪ್ರಕಾರ ಮಸೀದಿ ನಿರ್ಮಾಣವಾಗುತ್ತಿಲ್ಲ. ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಿಂದೂಗಳು ಮುನ್ಸಿಪಾಲಿಟಿಗೆ ದೂರು ನೀಡಿದ್ದರು. ಹಿಂದೂಗಳು ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಇದೀಗ ಹಿಂದೂಗಳ ಹೋರಾಟದ ಬೆನ್ನಲ್ಲೇ ಮುಸ್ಲಿಂ ಸಮಿತಿ ಅಕ್ರಮವಾಗಿ ನಿರ್ಮಿಸಲಾಗಿರುವ ಕಟ್ಟಡದ ಭಾಗವನ್ನು ನಾವೇ ಕೆಡವುತ್ತೇವೆ ಎಂದು ಒಪ್ಪಿಗೆ ಪತ್ರ ನೀಡಿದೆ. ಇದರೊಂದಿಗೆ ಮಸೀದಿ ವಿವಾದಕ್ಕೆ ಸದ್ಯದ ಮಟ್ಟಿಗೆ ಅಂತ್ಯ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments