Webdunia - Bharat's app for daily news and videos

Install App

ಹಿಂದೂಗಳ ಪ್ರತಿಭಟನೆ ಬಳಿಕ ಮಸೀದಿಯ ಅಕ್ರಮ ಕಟ್ಟಡ ತೆರವುಗೊಳಿಸಲು ಒಪ್ಪಿದ ಮುಸ್ಲಿಂ ಸಮಿತಿ

Krishnaveni K
ಗುರುವಾರ, 12 ಸೆಪ್ಟಂಬರ್ 2024 (17:10 IST)
ಶಿಮ್ಲಾ: ಕೋರ್ಟ್ ಆದೇಶವನ್ನೂ ಧಿಕ್ಕರಿಸಿ ಮಸೀದಿಗೆ ಕಟ್ಟಡ ಕಟ್ಟಿರುವುದನ್ನು ವಿರೋಧಿಸಿ ನಿನ್ನೆ ಶಿಮ್ಲಾದಲ್ಲಿ ಹಿಂದೂಗಳಿಂದ ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಈಗ ಮುಸ್ಲಿಂ ಸಮಿತಿ ಅಕ್ರಮ ಕಟ್ಟಡ ತೆರವುಗೊಳಿಸಲು ಸಮ್ಮತಿಸಿದೆ.

ಇದರೊಂದಿಗೆ ಹಿಮಾಚಲಪ್ರದೇಶದ ಅಕ್ರಮ ಮಸೀದಿ ಕಟ್ಟಡ ವಿವಾದಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಿದೆ. ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಅಕ್ರಮವಾಗಿ ಮಸೀದಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿತ್ತು. ಇದರ ಬಗ್ಗೆ ಆಕ್ರೋಶಗೊಂಡಿದ್ದ ಹಿಂದೂಗಳು ಭಾರೀ ಪ್ರತಿಭಟನೆ ನಡೆಸಿದ್ದರು.

ನಕ್ಷೆಯ ಪ್ರಕಾರ ಮಸೀದಿ ನಿರ್ಮಾಣವಾಗುತ್ತಿಲ್ಲ. ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಿಂದೂಗಳು ಮುನ್ಸಿಪಾಲಿಟಿಗೆ ದೂರು ನೀಡಿದ್ದರು. ಹಿಂದೂಗಳು ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಇದೀಗ ಹಿಂದೂಗಳ ಹೋರಾಟದ ಬೆನ್ನಲ್ಲೇ ಮುಸ್ಲಿಂ ಸಮಿತಿ ಅಕ್ರಮವಾಗಿ ನಿರ್ಮಿಸಲಾಗಿರುವ ಕಟ್ಟಡದ ಭಾಗವನ್ನು ನಾವೇ ಕೆಡವುತ್ತೇವೆ ಎಂದು ಒಪ್ಪಿಗೆ ಪತ್ರ ನೀಡಿದೆ. ಇದರೊಂದಿಗೆ ಮಸೀದಿ ವಿವಾದಕ್ಕೆ ಸದ್ಯದ ಮಟ್ಟಿಗೆ ಅಂತ್ಯ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಇಸ್ರೇಲ್ ನಾಮನಿರ್ದೇಶನ

ಬಿಪಿ ಅಲ್ಲ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಇದೇ: ಡಾ ಸಿಎನ್ ಮಂಜುನಾಥ್

Karnataka Weather: ಕರಾವಳಿ ಜಿಲ್ಲೆಯವರೇ ಇಂದು ಎಚ್ಚರ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಮುಂದಿನ ಸುದ್ದಿ
Show comments