ರಾಮ ಮಂದಿರ ಕಟ್ಟಲು ಇಟ್ಟಿಗೆ ಸಮೇತ ಅಯೋಧ್ಯೆಗೆ ಬಂದ ಮುಸ್ಲಿಮರು!

Webdunia
ಶನಿವಾರ, 22 ಏಪ್ರಿಲ್ 2017 (11:41 IST)
ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಬಗ್ಗೆ ಮುಸ್ಲಿಂ ಮತ್ತು ಹಿಂದೂ ಧರ್ಮೀಯರ ನಡುವೆ ಒಂದೆಡೆ ಚರ್ಚೆ ತಾರಕಕ್ಕೇರಿದ್ದರೆ, ಇನ್ನೊಂದೆಡೆ ಕೆಲವು ಮುಸ್ಲಿಂ ಕರ ಸೇವಕರು, ರಾಮ ಮಂದಿರ ಕಟ್ಟಲು ಇಟ್ಟಿಗೆ ಸಮೇತ ಸ್ಥಳಕ್ಕೆ ಆಗಮಿಸಿದ್ದಾರೆ!

 
ಮುಸ್ಲಿಂ ಕರ ಸೇವಕ್ ಮಂಚ್  ಸಂಘಟನೆಯ ಕಾರ್ಯಕರ್ತರು ರಾಮಜನ್ಮಭೂಮಿಯಲ್ಲಿ ಹಿಂದೂ ದೇವರಾದ ಶ್ರೀರಾಮ ಚಂದ್ರನ ದೇವಾಲಯ ಕಟ್ಟಲು ಲಾರಿ ತುಂಬಾ ಇಟ್ಟಿಗೆ ತುಂಬಿಕೊಂಡು ಬಂದಿದ್ದಾರೆ.

ಜೈ ಶ್ರೀರಾಮ್ ಎನ್ನುತ್ತಾ ಬಂದ ಮುಸ್ಲಿಮರ ನೋಡಿ ಅಲ್ಲಿದ್ದ ಸ್ಥಳೀಯರು ನಿಜಕ್ಕೂ ಮೂಕ ವಿಸ್ಮಿತರಾಗಿದ್ದರು. ಅಝಮ್ ಖಾನ್ ಎಂಬವರು ಈ ಸಂಘಟನೆಯ ನಾಯಕರು. ನಾವು ರಾಮ ಮಂದಿರ ಕಟ್ಟುವ ಉದ್ದೇಶದಿಂದ ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಬಂದಿದ್ದೇವೆಂದು ಅವರು ಹೇಳಿಕೊಂಡಿದ್ದಾರೆ.

ಆದರೆ ಸ್ಥಳೀಯಾಡಳಿತ ಅವರನ್ನು ಉದ್ದೇಶಿತ ಕಾರ್ಯ ಮಾಡಲು ಬಿಡಲಿಲ್ಲ. ಸ್ಥಳೀಯಾಡಳಿತ ಮನವೊಲಿಸಿದ ನಂತರ ಅವರು ರಾಮ ಮಂದಿರ ಕಟ್ಟುವ ನಿರ್ಧಾರದಿಂದ ಹಿಂದೆ ಸರಿದರಲ್ಲದೆ, ತಂದಿದ್ದ ಇಟ್ಟಿಗೆಗಳನ್ನು ಸುರಕ್ಷಿತವಾಗಿಡುವಂತೆ ಸ್ಥಳೀಯರಿಗೆ ಸೂಚಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments