Webdunia - Bharat's app for daily news and videos

Install App

ರಾಮ ಮಂದಿರ ಕಟ್ಟಲು ಇಟ್ಟಿಗೆ ಸಮೇತ ಅಯೋಧ್ಯೆಗೆ ಬಂದ ಮುಸ್ಲಿಮರು!

Webdunia
ಶನಿವಾರ, 22 ಏಪ್ರಿಲ್ 2017 (11:41 IST)
ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಬಗ್ಗೆ ಮುಸ್ಲಿಂ ಮತ್ತು ಹಿಂದೂ ಧರ್ಮೀಯರ ನಡುವೆ ಒಂದೆಡೆ ಚರ್ಚೆ ತಾರಕಕ್ಕೇರಿದ್ದರೆ, ಇನ್ನೊಂದೆಡೆ ಕೆಲವು ಮುಸ್ಲಿಂ ಕರ ಸೇವಕರು, ರಾಮ ಮಂದಿರ ಕಟ್ಟಲು ಇಟ್ಟಿಗೆ ಸಮೇತ ಸ್ಥಳಕ್ಕೆ ಆಗಮಿಸಿದ್ದಾರೆ!

 
ಮುಸ್ಲಿಂ ಕರ ಸೇವಕ್ ಮಂಚ್  ಸಂಘಟನೆಯ ಕಾರ್ಯಕರ್ತರು ರಾಮಜನ್ಮಭೂಮಿಯಲ್ಲಿ ಹಿಂದೂ ದೇವರಾದ ಶ್ರೀರಾಮ ಚಂದ್ರನ ದೇವಾಲಯ ಕಟ್ಟಲು ಲಾರಿ ತುಂಬಾ ಇಟ್ಟಿಗೆ ತುಂಬಿಕೊಂಡು ಬಂದಿದ್ದಾರೆ.

ಜೈ ಶ್ರೀರಾಮ್ ಎನ್ನುತ್ತಾ ಬಂದ ಮುಸ್ಲಿಮರ ನೋಡಿ ಅಲ್ಲಿದ್ದ ಸ್ಥಳೀಯರು ನಿಜಕ್ಕೂ ಮೂಕ ವಿಸ್ಮಿತರಾಗಿದ್ದರು. ಅಝಮ್ ಖಾನ್ ಎಂಬವರು ಈ ಸಂಘಟನೆಯ ನಾಯಕರು. ನಾವು ರಾಮ ಮಂದಿರ ಕಟ್ಟುವ ಉದ್ದೇಶದಿಂದ ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಬಂದಿದ್ದೇವೆಂದು ಅವರು ಹೇಳಿಕೊಂಡಿದ್ದಾರೆ.

ಆದರೆ ಸ್ಥಳೀಯಾಡಳಿತ ಅವರನ್ನು ಉದ್ದೇಶಿತ ಕಾರ್ಯ ಮಾಡಲು ಬಿಡಲಿಲ್ಲ. ಸ್ಥಳೀಯಾಡಳಿತ ಮನವೊಲಿಸಿದ ನಂತರ ಅವರು ರಾಮ ಮಂದಿರ ಕಟ್ಟುವ ನಿರ್ಧಾರದಿಂದ ಹಿಂದೆ ಸರಿದರಲ್ಲದೆ, ತಂದಿದ್ದ ಇಟ್ಟಿಗೆಗಳನ್ನು ಸುರಕ್ಷಿತವಾಗಿಡುವಂತೆ ಸ್ಥಳೀಯರಿಗೆ ಸೂಚಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments