Webdunia - Bharat's app for daily news and videos

Install App

ಪಾಕಿಸ್ತಾನ ಯೋಧರ ತಲೆಗೆ 5 ಕೋಟಿ ರೂ. ಬಹುಮಾನ ಘೋಷಿಸಿದ ಮುಸ್ಲಿಂ ಸಂಘಟನೆ!

Webdunia
ಮಂಗಳವಾರ, 9 ಮೇ 2017 (11:15 IST)
ನವದೆಹಲಿ: ಭಾರತೀಯ ಯೋಧರ ಶಿರಚ್ಛೇದ ನಡೆಸಿದ ಪಾಕಿಸ್ತಾನ ಸೈನಿಕರ ವಿರುದ್ದ ಭಾರತದಲ್ಲಿ ಭಾರೀ ಆಕ್ರೋಶವಿದೆ. ಇದೀಗ ಮುಸ್ಲಿಂ ಸಂಘಟನೆಯೊಂದು ಪಾಕ್ ಯೋಧರ ತಲೆ ಕಡಿದು ತರುವವರಿಗೆ ಬಹುಮಾನ ಘೋಷಿಸಿದೆ.

 
ದೆಹಲಿ ಮೂಲದ ಮುಸ್ಲಿಂ ಯುವ ಆತಂಕವಾದಿ ಸಮಿತಿ ಈ ಘೋಷಣೆ ಮಾಡಿದೆ. ಪಾಕಿಸ್ತಾನಕ್ಕೆ ಹೋಗಿ ಅಲ್ಲಿನ ಸೈನಿಕರ ತಲೆ ಕಡಿದು ಭಾರತಕ್ಕೆ ತಂದವರಿಗೆ 5 ಕೋಟಿ ರೂ. ಇನಾಮು ನೀಡುವುದಾಗಿ ಸಂಘಟನೆಯ ಮುಖ್ಯಸ್ಥ ಮೊಹಮ್ಮದ್ ಶಕೀಲ್ ಸೈಫಿ ಹೇಳಿದ್ದಾರೆ.

ಇದಕ್ಕಾಗಿ ತಮ್ಮ ಸಂಘಟನೆಯ ಸದಸ್ಯರಿಂದ ಹಣ ಸಂಗ್ರಹ ಮಾಡುವುದಾಗಿ ಅವರು ಹೇಳಿದ್ದಾರೆ. ಕಳೆದ ವರ್ಷ ಸರ್ಜಿಕಲ್ ಸ್ಟ್ರೈಕ್ ಮಾಡಿದಂತೆ ಭಾರತ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೇಶದ ಇತರ ಯುವಕರಂತೆ ಮುಸ್ಲಿಂ ಯುವಕರೂ ದೇಶಕ್ಕಾಗಿ ಎಂತಹ ತ್ಯಾಗ ಮಾಡಲೂ ಸಿದ್ಧ ಎಂದು ಅವರು ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments