Webdunia - Bharat's app for daily news and videos

Install App

ನನ್ನ ಪರಿಸ್ಥಿತಿ ಅಡ್ವಾಣಿಯಂತಾಗಿದೆ: ಮಾಜಿ ಸಚಿವ ಖಾಡ್ಸೆ

Webdunia
ಸೋಮವಾರ, 28 ಆಗಸ್ಟ್ 2017 (19:04 IST)
ಕಳೆದ ವರ್ಷ ಭ್ರಷ್ಟಾಚಾರ ಆರೋಪಗಳ ಮೇಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಮುಖಂಡ ಏಕನಾಥ್ ಖಾಡ್ಸೆ, ನನ್ನ ಪರಿಸ್ಥಿತಿ ಪಕ್ಷದ ಹಿರಿಯ ನಾಯಕ ಎಲ್‌.ಕೆ.ಆಡ್ವಾಣಿಯಂತಾಗಿದೆ ಎಂದು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲವೆಬ್ಬಿಸಿದೆ.
ತವರುಕ್ಷೇತ್ರವಾದ ಜಲಗಾಂವ್‌‍ನಲ್ಲಿ ಆಯೋಜಿಸಲಾಗಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದಲ್ಲಿ ನನ್ನ ಪರಿಸ್ಥಿತಿ ರಾಷ್ಟ್ರೀಯ ನಾಯಕ ಎಲ್.ಕೆ.ಆಡ್ವಾಣಿ ಅವರಂತಾಗಿದೆ. ಪಕ್ಷದ ಹಿರಿಯ ನಾಯಕರು ಮಾರ್ಗದರ್ಶನ ನೀಡಬೇಕು, ಪಕ್ಷಕ್ಕೆ ಬಂದ ಹೊಸ ನಾಯಕರು ಅಧಿಕಾರ ಅನುಭವಿಸಬೇಕು ಎನ್ನುವಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.  
 
ಭಾಷಣದಿಂದ ಆಕ್ರೋಶಗೊಂಡ ಬೆಂಬಲಿಗರು ಜಿಲ್ಲಾ ಘಟಕ ತೀರ್ಮಾನ ತೆಗೆದುಕೊಂಡು ಖಾಡ್ಸೆಯವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು ಎಂದು ಘೋಷಣೆಗಳನ್ನು ಕೂಗಿದರು. 
 
ನಾನು ಹಲವು ವರ್ಷಗಳಿಂದ ರಾಜ್ಯ ಬಿಜೆಪಿಯಲ್ಲಿ ಕೆಲಸ ಮಾಡಿದ್ದೇನೆ ಮತ್ತು ಪಕ್ಷದ ಬೆಳವಣಿಗೆಗೆ ಸಹಾಯ ಮಾಡಿದ್ದೇನೆ. ಅದರಂತೆ, ಆಡ್ವಾಣಿ ಕೂಡಾ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷವನ್ನು ಬೆಳೆಸಿದ್ದಾರೆ. ಆದರೆ, ಇದೀಗ ಹಿರಿಯರು ಮಾರ್ಗದರ್ಶನ ನೀಡಬೇಕು, ಹೊಸಬರು ಅಧಿಕಾರ ಅನುಭವಿಸಬೇಕು ಎನ್ನುವಂತಾಗಿರುವುದು ವಿಷಾದನೀಯ ಎಂದು ಮಾಜಿ ಸಚಿವ ಏಕನಾಥ್ ಖಾಡ್ಸೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments