ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ರನ್ನು ವಿಧಾನಸಭೆ ಚುನಾವಣೆಯಲ್ಲಿ ಸೋಲಿಸುವುದೇ ನನ್ನ ಪ್ರಮುಖ ಗುರಿ ಎಂದು ಮಾಜಿ ಮುಖ್ಯಮಂತ್ರಿ ಹಿಂದುಸ್ತಾನ್ ಅವಾಮ್ ಮೋರ್ಚಾದ ಅಧ್ಯಕ್ಷ ಜಿತನ್ ರಾಮ್ ಮಾಂಜಿ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಕೋಮುವಾದಿ ಪಕ್ಷ ಎಂದು ಕರೆಯುವುದು ತಪ್ಪು ಎಂದು 70 ವರ್ಷ ವಯಸ್ಸಿನ ಮಾಂಜಿ ಹೇಳಿದ್ದಾರೆ.
ಒಂದು ವೇಳೆ ನಾನು ಮತ್ತೆ ಬಿಹಾರ್ ಮುಖ್ಯಮಂತ್ರಿಯಾದಲ್ಲಿ ಮಾದರಿ ರಾಜ್ಯವನ್ನಾಗಿ ಮಾಡಲು ಪ್ರಯತ್ನಿಸುತ್ತೇನೆ. ಸದ್ಯ ನಿತೀಶ್ ಕುಮಾರ್ರನ್ನು ಸೋಲಿಸುವ ಗುರಿ ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.
ನಿತೀಶ್ ಕುಮಾರ್ರ ಒರಟುತನ ನನ್ನನ್ನು ಅವರ ಪ್ರಮುಖ ನಂಬರ್ ಒನ್ ಶತ್ರುವಾಗಿಸಿದೆ. ಬಿಹಾರ್ ಅಭಿವೃದ್ಧಿಗೆ ಅಡ್ಡಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ 2014ರ ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಜೆಡಿಯು ನಾಯಕರಾಗಿದ್ದ ಮಾಂಜಿ ಬಿಹಾರ್ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದರು.