Webdunia - Bharat's app for daily news and videos

Install App

ಜೀವ ಬಲಿಪಡೆದ ಮೈಕೊರೆಯುವ ಚಳಿ: ಉಸಿರುಗಟ್ಟಿ ಒಂದೇ ಕುಟುಂಬದ ಐವರು ದಾರುಣ ಸಾವು

Sampriya
ಸೋಮವಾರ, 6 ಜನವರಿ 2025 (14:23 IST)
ಶ್ರೀನಗರ: ಮೈಕೊರೆಯುವ ಚಳಿ ತಡೆಯದೆ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಶ್ರೀನಗರ ಜಿಲ್ಲೆಯ ಪಂದ್ರಾಥಾನ್ ಪ್ರದೇಶದಲ್ಲಿ ನಡೆದಿದೆ.

ಬಾರಮುಲ್ಲಾ ಜಿಲ್ಲೆಯಿಂದ ಬಂದಿದ್ದ ಕುಟುಂಬ ಪಂದ್ರಾಥಾನ್ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜಿಲ್ಲೆಯಲ್ಲಿರುವ ಚಳಿಯ ಪರಿಣಾಮದಿಂದ ಉಸಿರುಗಟ್ಟಿದ್ದು, ಪ್ರಜ್ಞಾಹೀನರಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ರವಾನಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಆಪ್ತರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ದೇವರು ನೋವನ್ನು ಭರಿಸುವ ಶಕ್ತಿ ನೀಡಲಿ. ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

ಚಳಿಗಾಲದಲ್ಲಿ ಬಿಸಿಮಾಡುವ ಸಾಧನಗಳನ್ನು ಬಳಸುವಾಗ ಅತ್ಯಂತ ಜಾಗರೂಕರಾಗಿರಿ. ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಬಿಸಿ ಉಪಕರಣಗಳ ಸುರಕ್ಷಿತ ಬಳಕೆಯ ಸಲಹೆಗಳನ್ನು ಪಾಲಿಸಿ. ವಿವೇಚನೆಯಿಲ್ಲದೇ ಯಾವುದನ್ನು ಕೂಡ ಬಳಸಬೇಡಿ. ಈ ಗ್ಯಾಜೆಟ್‌ಗಳು ಕಾರ್ಬನ್ ಮಾನಾಕ್ಸೈಡ್ ಅನ್ನು ಉತ್ಪಾದಿಸುತ್ತವೆ ಮತ್ತು ಸಂಪೂರ್ಣವಾಗಿ ಮುಚ್ಚಿದ ಕೋಣೆಯಲ್ಲಿ ಈ ಉಪಕರಣಗಳನ್ನು ಬಳಸುವುದು ಮಾರಕ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Faridabad shocker: ಗರ್ಲ್ ಫ್ರೆಂಡ್ ನ ಕೊಂದು ಬೆಡ್ ಬಾಕ್ಸ್ ನಲ್ಲಿ ಶವ ಬಚ್ಚಿಟ್ಟಿದ್ದ ಭೂಪ

Pehalgam: ಅಮಾಯಕರನ್ನು ಕೊಂದರೆ ಅಲ್ಲಾಹ್ ಕ್ಷಮಿಸಲ್ಲ: ನಾವು ದೇಶದ ಜೊತೆಗಿದ್ದೇವೆ ಎಂದು ಮುಸ್ಲಿಮರು

Karnataka Rains: ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ ಇಲ್ಲಿದೆ ಸಂಪೂರ್ಣ ವಿವರ

Mallikarjun Kharge: ನಾವೆಲ್ಲಾ ಇರ್ತೀವಿ, ಹೋಗ್ತೀವಿ ದೇಶದ ಭದ್ರತೆ ಎಲ್ಲಕ್ಕಿಂತ ಮುಖ್ಯ: ಮಲ್ಲಿಕಾರ್ಜುನ ಖರ್ಗೆ

Indian Navy: ನಾವು ರೆಡಿ ಎಂದು ಕ್ಷಿಪಿಣಿ ಹಾರಿಸಿ ಪಾಕಿಸ್ತಾನಕ್ಕೆ ಠಕ್ಕರ್ ಕೊಟ್ಟ ಭಾರತೀಯ ನೌಕಾ ಸೇನೆ

ಮುಂದಿನ ಸುದ್ದಿ
Show comments