ಜೀವ ಬಲಿಪಡೆದ ಮೈಕೊರೆಯುವ ಚಳಿ: ಉಸಿರುಗಟ್ಟಿ ಒಂದೇ ಕುಟುಂಬದ ಐವರು ದಾರುಣ ಸಾವು

Sampriya
ಸೋಮವಾರ, 6 ಜನವರಿ 2025 (14:23 IST)
ಶ್ರೀನಗರ: ಮೈಕೊರೆಯುವ ಚಳಿ ತಡೆಯದೆ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಶ್ರೀನಗರ ಜಿಲ್ಲೆಯ ಪಂದ್ರಾಥಾನ್ ಪ್ರದೇಶದಲ್ಲಿ ನಡೆದಿದೆ.

ಬಾರಮುಲ್ಲಾ ಜಿಲ್ಲೆಯಿಂದ ಬಂದಿದ್ದ ಕುಟುಂಬ ಪಂದ್ರಾಥಾನ್ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜಿಲ್ಲೆಯಲ್ಲಿರುವ ಚಳಿಯ ಪರಿಣಾಮದಿಂದ ಉಸಿರುಗಟ್ಟಿದ್ದು, ಪ್ರಜ್ಞಾಹೀನರಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ರವಾನಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಆಪ್ತರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ದೇವರು ನೋವನ್ನು ಭರಿಸುವ ಶಕ್ತಿ ನೀಡಲಿ. ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

ಚಳಿಗಾಲದಲ್ಲಿ ಬಿಸಿಮಾಡುವ ಸಾಧನಗಳನ್ನು ಬಳಸುವಾಗ ಅತ್ಯಂತ ಜಾಗರೂಕರಾಗಿರಿ. ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಬಿಸಿ ಉಪಕರಣಗಳ ಸುರಕ್ಷಿತ ಬಳಕೆಯ ಸಲಹೆಗಳನ್ನು ಪಾಲಿಸಿ. ವಿವೇಚನೆಯಿಲ್ಲದೇ ಯಾವುದನ್ನು ಕೂಡ ಬಳಸಬೇಡಿ. ಈ ಗ್ಯಾಜೆಟ್‌ಗಳು ಕಾರ್ಬನ್ ಮಾನಾಕ್ಸೈಡ್ ಅನ್ನು ಉತ್ಪಾದಿಸುತ್ತವೆ ಮತ್ತು ಸಂಪೂರ್ಣವಾಗಿ ಮುಚ್ಚಿದ ಕೋಣೆಯಲ್ಲಿ ಈ ಉಪಕರಣಗಳನ್ನು ಬಳಸುವುದು ಮಾರಕ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಮುಂದಿನ ಸುದ್ದಿ
Show comments