Webdunia - Bharat's app for daily news and videos

Install App

ಜಯಾ ನೀಡಿದ ಕಾರನ್ನು ಮರಳಿಸಿ ನಂಜಿಲ್ ಸಂಪತ್ ರಾಜಕೀಯ ಸನ್ಯಾಸ

Webdunia
ಬುಧವಾರ, 4 ಜನವರಿ 2017 (17:11 IST)
ಅಣ್ಣಾ ಡಿಎಂಕೆ ಪಕ್ಷದ ಹಿರಿಯ ನಾಯಕ, ಪ್ರಮುಖ ವಾಗ್ಮಿ ನಂಜಿಲ್ ಸಂಪತ್ ಪಕ್ಷ ತೊರೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ತಮಗೆ ನೀಡಿದ್ದ ಇನ್ನೋವಾ ಕಾರನ್ನು ರಾಯಪೇಟೆಯಲ್ಲಿರುವ ಪಕ್ಷದ ಮುಖ್ಯ ಕಾರ್ಯಾಲಯದಲ್ಲಿ ಮರಳಿಸಿ ರಾಜಕೀಯ ಸನ್ಯಾಸವನ್ನು ತೆಗೆದುಕೊಳ್ಳುತ್ತಿರುವುದಾಗಿ ಘೋಷಿಸಿದ್ದಾರೆ. 

ಪ್ರಚಾರ ವಿಭಾಗದ ಸಹಕಾರ್ಯದರ್ಶಿಯಾಗಿದ್ದ ಸಂಪತ್‌ರ 20145ರ ಪ್ರವಾಹದ ಸಂದರ್ಭದಲ್ಲಿ ಜಯಾ ಸರ್ಕಾರವನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಎಲ್ಲ ಸ್ಥಾನಗಳಿಂದ ಜಯಾ ಕಿತ್ತು ಹಾಕಿದ್ದರು. 
 
ಹೀಗಾಗಿ ಹಲವು ತಿಂಗಳಿಂದ ಪಕ್ಷದಿಂದ ದೂರ ಕಾಯ್ದುಕೊಂಡಿದ್ದ ಸಂಪತ್ ಮಂಗಳವಾರ ಪಕ್ಷವನ್ನು ತೊರೆದಿದ್ದಾರೆ.
 
2012ರಲ್ಲಿ ಸಂಪತ್ ಎಮ್‌ಡಿಎಂಕೆ ತೊರೆದು ಎಐಡಿಎಂಕೆ ಸೇರಿದ ಸಂದರ್ಭದಲ್ಲಿ ಜಯಾರಿಂದ ಕಾರನ್ನು ಉಡುಗೊರೆಯಾಗಿ ಪಡೆದಿದ್ದರು. 
 
ತಾವು  ಖಾಸಗಿ ಕಾರಣಕ್ಕೆ ಎಂದಿಗೂ ಈ ಕಾರನ್ನು ಬಳಸಿಲ್ಲ. ಕಳೆದ ಅನೇಕ ತಿಂಗಳಿಂದ ಚುನಾವಣಾ ಪ್ರಚಾರವಿಲ್ಲದಿದ್ದುದರಿಂದ ನನ್ನ ಸ್ನೇಹಿತನ ಮನೆಯಲ್ಲಿ ಪಾರ್ಕ್ ಮಾಡಿಟ್ಟಿದ್ದೆ. ನಾನು ಇನ್ನೊವಾ ಸಂಪತ್ ಎಂದು ಕರೆದುಕೊಳ್ಳಲು ಬಯಸವುದಿಲ್ಲ, ಹೀಗಾಗಿ ಕಾರನ್ನು ಮರಳಿಸುತ್ತಿದ್ದೇನೆ ಎಂದು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments