Webdunia - Bharat's app for daily news and videos

Install App

ಮೂರನೇ ಬಾರಿ ಎನ್‌ಡಿಎ ನಾಯಕರಾದ ನರೇಂದ್ರ ಮೋದಿ

sampriya
ಬುಧವಾರ, 5 ಜೂನ್ 2024 (20:44 IST)
Photo By X
ದೆಹಲಿ: ನವದೆಹಲಿಯಲ್ಲಿ ಇಂದು ನಡೆದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಎನ್‌ಡಿಎ ನಾಯಕನಾಗಿ ಆಯ್ಕೆಮಾಡಲಾಯಿತು. ಇನ್ನೂ ಸಭೆಯಲ್ಲಿ  ಸರ್ಕಾರ ಸರ್ಕಾರ ರಚನೆ ಬಗ್ಗೆ ನಾಯಕರು ಚರ್ಚಿಸಿದ್ದಾರೆ.

ಎನ್ ಡಿಎ ನಾಯಕರ ಸಭೆ ಮುಕ್ತಾಯಗೊಂಡ ಬೆನ್ನಲ್ಲಿ ಎಲ್ಲರೂ ಒಗ್ಗಟ್ಟಾಗಿ ಫೋಟೋ ತೆಗೆಸಿಕೊಂಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.  ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ.

ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಗೆ ಮಿತ್ರ ಪಕ್ಷಗಳ ಪಾತ್ರವು ಮುಖ್ಯವಾಗಿದ್ದು  ಸಭೆಯಲ್ಲಿ ಎಲ್ಲ ಪಕ್ಷಗಳು ಬೆಂಬಲ ಪತ್ರಗಳನ್ನು ನೀಡಿದ್ದು, ಸರ್ಕಾರ ರಚಿಸಲು ಹಕ್ಕು ಮಂಡಿಸಲಾಗುತ್ತದೆ. ಇನ್ನೂ  ಎನ್‌ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ಜೆಡಿಯು, ಟಿಡಿಪಿ, ಶಿವಸೇನೆ ಹಾಗೂ ಎಲ್‌ಜೆಪಿ ಪಕ್ಷಗಳ ಪಾತ್ರ ನಿರ್ಣಾಯಕವಾಗಿರುವ ಕಾರಣ ಆಯಾ ಪಕ್ಷಗಳ ನಾಯಕರು ಮಹತ್ವದ ಖಾತೆ, ಹುದ್ದೆ ಸೇರಿ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ ಸಂಸತ್‌ ಪ್ರವೇಶಿಸಿದ ಎಚ್‌ ಡಿ ಕುಮಾರಸ್ವಾಮಿ ಅವರು ಕೂಡ  ಮೋದಿ ಸಂಪುಟದಲ್ಲಿ ಬೇಡಿಕೆ ಇಟ್ಟಿರುವ ಸಾಧ್ಯತೆಯಿದೆ.

ಇನ್ನೂ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಎಲ್‌ಜಿಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಬಿಜೆಪಿಯ ನಾಯಕರು ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments