Webdunia - Bharat's app for daily news and videos

Install App

ಭಾರತೀಯ ಸೇನೆ ಮಾತನಾಡಲ್ಲ, ಕೇವಲ ಕಾರ್ಯಾಚರಣೆ: ಪ್ರಧಾನಿ ಮೋದಿ

Webdunia
ಶುಕ್ರವಾರ, 14 ಅಕ್ಟೋಬರ್ 2016 (19:51 IST)
ಭಾರತೀಯ ಸೇನೆ ಯಾವತ್ತೂ ಮಾತನಾಡುವುದಿಲ್ಲ ಬದಲಿಗೆ ಕಾರ್ಯಾಚರಣೆ ನಡೆಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
 
ಸೀಮಿತ ದಾಳಿಯನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ, ದೇಶ ರಕ್ಷಣೆಯೇ ಭಾರತೀಯ ಸೇನೆಯ ಹೆಮ್ಮೆಯ ಕರ್ತವ್ಯವಾಗಿದೆ. ದೇಶಕ್ಕಾಗಿ ಯಾವ ಹೊಣೆ ಬೇಕಾದರೂ ಸೇನೆ ನಿಭಾಯಿಸಲು ಸಿದ್ದವಿದೆ ಎಂದರು. 
 
ನಗರದ ಲಾಲ್ ಪರೇಡ್ ಕ್ರೀಡಾಂಗಣದಲ್ಲಿ ಮಾತನಾಡಿದ ಮೋದಿ,  ನಮ್ಮ ಸೈನಿಕರ ಬಗ್ಗೆ ಮಾತನಾಡುವಾಗ ಅವರ ಡ್ರೆಸ್ ಮತ್ತು ಪಡೆದ ಪದಕಗಳ ಬಗ್ಗೆ ಮಾತನಾಡುತ್ತೇವೆ. ಅವರನ್ನು ಮಾನವೀಯತೆಯ ದೃಷ್ಟಿಯಿಂದ ಕಾಣಬೇಕಾಗಿರುವುದು ಅಗತ್ಯವಾಗಿದೆ ಎಂದರು. 
 
ಹುತಾತ್ಮರಾದ ಸೈನಿಕರಿಗೆ ಮತ್ತು ಅವರ ಕುಟುಂಬಗಳಿಗೆ ಶೃದ್ಧಾಂಜಲಿ ಅರ್ಪಿಸುವ ಸೌಭಾಗ್ಯ ನನಗೆ ಒದಗಿ ಬಂದಿದೆ ಎಂದು ಶೌರ್ಯ ಸಮ್ಮಾನ್ ಸಭಾ ಕಾರ್ಯಕ್ರಮಲ್ಲಿ ಮೋದಿ ತಿಳಿಸಿದರು.
 
ಜಮ್ಮು ಶ್ರೀನಗರದಲ್ಲಿ ಪ್ರವಾಹ ಬಂದಾಗ ಭಾರತೀಯ ಸೇನೆ ಹಲವಾರು ಜನರನ್ನು ರಕ್ಷಿಸಿತ್ತು. ಇದೇ ವ್ಯಕ್ತಿಗಳೇ ನಮ್ಮ ಮೇಲೆ ಕಲ್ಲು ಹೊಡೆಯುತ್ತಿರುವುದು ಎಂದು ಯಾವತ್ತು ಚಿಂತನೆ ಮಾಡಲ್ಲ. ಇದೇ ನಮ್ಮ ದೇಶದ ಹೆಮ್ಮಯ ಸೈನಿಕರ ಗುಣವಾಗಿದೆ ಎಂದು ಕೊಂಡಾಡಿದರು.
 
ಯೆಮನ್ ದೇಶದಲ್ಲಿ ಪ್ರವಾಹ ಪ್ರಕೋಪ ಎದುರಾದಾಗ ಭಾರತೀಯ ಸೇನೆ ಕೇವಲ ಅಲ್ಲಿದ್ದ ಭಾರತೀಯರನ್ನು ರಕ್ಷಿಸಲಿಲ್ಲ. ಪಾಕಿಸ್ತಾನ, ಯೆಮನ್ ಸೇರಿದಂತೆ ಇತರ ರಾಷ್ಟ್ರಗಳ ನಾಗರಿಕರನ್ನು ರಕ್ಷಿಸಿತ್ತು ಎನ್ನುವುದನ್ನು ಮರೆಯಬಾರದು ಎಂದು ಪ್ರಧಾನಿ ಮೋದಿ ತಿಳಿಸಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments