Webdunia - Bharat's app for daily news and videos

Install App

ಲೋಕಸಭೆಗೆ ನೂತನ ಸಚಿವರನ್ನು ಪರಿಚಯಿಸಿದ ಪ್ರಧಾನಿ ಮೋದಿ

Webdunia
ಸೋಮವಾರ, 18 ಜುಲೈ 2016 (21:02 IST)
ಮುಂಗಾರು ಅಧಿವೇಶನದ ಆರಂಭದ ದಿನವಾದ ಇಂದು ಪ್ರಧಾನಿ ಮೋದಿ, ಸಚಿವ ಸಂಪುಟಕ್ಕೆ ನೂತನವಾಗಿ ಸೇರ್ಪಡೆಗೊಂಡಿರುವ ಸಚಿವರನ್ನು ಸಂಸತ್ತಿಗೆ ಪರಿಚಯಿಸಿದರು. 
 
ಕಳೆದ ಜುಲೈ 5 ರಂದು ನಡೆದ ಸಂಪುಟ ಪುನಾರಚನೆ ಸಂದರ್ಭದಲ್ಲಿ ಪ್ರಧಾನಿ ಮೋದಿ 19 ನೂತನ ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿದ್ದರು.
 
ಎಚ್‌ಆರ್‌ಡಿ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್, ವಿಜಯ್ ಗೋಯಲ್, ಅನಿಲ್ ಮಾಧವ ದವೆ, ಫಗ್ಗನ್ ಸಿಂಗ್ ಕುಲಸ್ತೆ, ಎಸ್‌ಎಸ್.ಆಹ್ಲುವಾಲಿಯಾ, ರಮೇಶ್ ಚಂದ್ರಪ್ಪ, ರಾಜೇನ್ ಗೊಹೈನ್, ಪುರುಷೋತ್ತಮ ರೂಪಾಲಾ, ಎಂ.ರೆ.ಅಕ್ಬರ್, ಜಸ್ವಂತ್ ಸಿನ್ಹಾ ಸುಮನ್‌ಭಾಯಿ ಭಾಭೋರ್, ಅರ್ಜುನ್ ರಾಮ್ ಮೇಘವಾಲ್, ಮಹೇಂದ್ರನಾಥ್ ಪಾಂಡೆ, ಅಜಯ್ ತಮಟಾ, ಕೃಷ್ಣ ರಾಜ್, ಮನಸುಖ್ ಮಂಡಾವಿಯಾ, ಅನುಪ್ರೀಯಾ ಪಟೇಲ್, ಸಿಆರ್. ಚೌಧರಿ, ಪಿಪಿ ಚೌಧರಿ ಮತ್ತು ಸುಭಾಶ್ ರಾಮರಾವ್ ಅಮ್ರೆಯವರನ್ನು ಸಂಸತ್ತಿಗೆ ಪರಿಚಯಿಸಲಾಯಿತು.
 
ಇದಕ್ಕಿಂತ ಮೊದಲು ಮೇಘಾಲಯದ ತುರಾ ಲೋಕಸಭಾ ಕ್ಷೇತ್ರದಿಂದ ಎನ್‌ಪಿಪಿ ಪಕ್ಷದ ಟಿಕೆಟ್‌ನಿಂದ ಜಯಗಳಿಸಿದ ಕೊನ್ರಾಡ್ ಕೊಂಗಕಲ್ ಸಂಗ್ಮಾ ಅವರ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.
 
ಕಳೆದ ಮಾರ್ಚ್ 2016ರಲ್ಲಿ ಖ್ಯಾತ ರಾಜಕಾರಣಿ ಪಿ.ಎ.ಸಂಗ್ಮಾ ಅವರ ನಿಧನದಿಂದ ತೆರವಾಗಿದ್ದ ತುರಾ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments