ಪ್ರಧಾನಿ ನರೇಂದ್ರ ಮೋದಿ ದೇಶದ ಅತ್ಯಂತ ದುರ್ಬಲ ಪ್ರಧಾನಿಯಾಗಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಮೋದಿಗೆ ದೊಡ್ಡ ದೊಡ್ಡ ಮಾತುಗಳನ್ನಾಡುವುದು ಗೊತ್ತಿದೆ. ಆದರೆ, ದೇಶದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ದೇಶದಲ್ಲಿ ಕೋಟಿ ಕೋಟಿ ವಿದ್ಯಾವಂತರು ನಿರುದ್ಯೋಗಿಗಳಾಗಿ ತ್ರಿಶಂಕು ಸ್ಥಿತಿಯನ್ನು ಎದುರಿಸುತ್ತಿದ್ದರೆ, ಬಡವರು, ಮಧ್ಯಮ ವರ್ದವರು ದರ ಏರಿಕೆಗಳಿಂದ ಕಂಗಾಲಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಜಮ್ಮು ಕಾಶ್ಮಿರ ಕುರಿತಂತೆ ತೋರಿದ ರಣತಂತ್ರ ವಿಫಲವಾಗಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ, ಪ್ರತಿಭಟನೆಗಳಿಗೆ ಮೋದಿಯೇ ಹೊಣೆಯಾಗಿದ್ದಾರೆ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ