Webdunia - Bharat's app for daily news and videos

Install App

ಪ್ರತಿ ಜಿಲ್ಲೆಯಲ್ಲೂ ಆಯುರ್ವೇದ ಆಸ್ಪತ್ರೆ ತೆರೆಯಲು ಚಿಂತನೆ: ಪ್ರಧಾನಿ ಮೋದಿ

Webdunia
ಬುಧವಾರ, 18 ಅಕ್ಟೋಬರ್ 2017 (13:17 IST)
ನವದೆಹಲಿ: ದೇಶದ ಪ್ರತಿ ಜಿಲ್ಲೆಯಲ್ಲೂ ಆಯುರ್ವೇದ ಆಸ್ಪತ್ರೆ ನಿರ್ಮಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಜತೆಗೆ ದೇಶದಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯಿಂದ ಸ್ಫೂರ್ತಿ ಪಡೆದು ಆರೋಗ್ಯ ಕ್ರಾಂತಿಗೆ ನಾಂದಿ ಹಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ದೆಹಲಿಯಲ್ಲಿ ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಬಡವರಿಗೆ ಅಗ್ಗದ ದರದಲ್ಲಿ ಆರೋಗ್ಯ ಸೇವೆ ನೀಡುವುದಕ್ಕೆ ಕೇಂದ್ರ ಬದ್ಧವಾಗಿದೆ. ಆಯುರ್ವೇದ ಎನ್ನುವುದು ಭಾರತದ ಶಕ್ತಿ. ಹೀಗಾಗಿ, ತಜ್ಞರು ಅಲೋಪತಿಯಂತೆ ಬೇಗನೆ ರೋಗ ಶಮನವಾಗಬಲ್ಲಂತ, ಯಾವುದೇ ಅಡ್ಡ ಪರಿಣಾಮ ಬೀರದಂತಹ ಆಯುರ್ವೇದ ಔಷಧವನ್ನು ಅಭಿವೃದ್ಧಿಪಡಿಸಬೇಕು ಎಂದು ಮೋದಿ ಹೇಳಿದರು. ಪ್ರತಿ ಜಿಲ್ಲೆಯಲ್ಲೂ ಆಯುರ್ವೇದ ಆಸ್ಪತ್ರೆ ಸ್ಥಾಪಿಸಲು ಆಯುಷ್‌ ಸಚಿವಾಲಯ ಚಿಂತನೆ ನಡೆಸುತ್ತಿದೆ. 3 ವರ್ಷದಲ್ಲಿ 65 ಆಯುಷ್‌ ಆಸ್ಪತ್ರೆಗಳನ್ನು ತೆರೆಯಲಾಗಿದೆ ಎಂದರು.

30 ವರ್ಷದಲ್ಲಿ ಐಟಿ ಕ್ರಾಂತಿ ನೋಡಿದ್ದೇವೆ. ಈಗ ಆಯುರ್ವೇದದ ಮೂಲಕ ಆರೋಗ್ಯ ಕ್ರಾಂತಿಯಾಗಬೇಕು. ಆಯುರ್ವೇದವನ್ನು ಬಲಿಷ್ಠಗೊಳಿಸಲು ಹಾಗೂ ಪುನಶ್ಚೇತನಗೊಳಿಸಲು ನಾವೆಲ್ಲ ಶಪಥ ಮಾಡೋಣ ಎಂದರು.

ತಾಜ್‌ ಮಹಲ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸಂಗೀತ್‌ ಸೋಮ್‌ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪ್ರಧಾನಿ, ಇತಿಹಾಸ ಹಾಗೂ ಪರಂಪರೆಯ ಬಗ್ಗೆ ಹೆಮ್ಮೆ ಇಲ್ಲದೆ ಹೋದರೆ, ಅಂತಹ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಪರಂಪರೆಯನ್ನು ಮರೆತರೆ ದೀರ್ಘ‌ಕಾಲದಲ್ಲಿ ಆ ದೇಶವು ತನ್ನ ಅಸ್ಮಿತೆಯನ್ನೇ ಕಳೆದುಕೊಳ್ಳಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮತಗಳವು ಪ್ರತಿಭಟನೆಗೆ ಬೆಂಗಳೂರಿನಲ್ಲಿ ಮರಗಳಿಗೆ ಕತ್ತರಿ

ಧರ್ಮಸ್ಥಳ ಕೇಸ್ ಗೆ ಇಂದು ಮಹತ್ವದ ತಿರುವು ಗ್ಯಾರಂಟಿ

Arecanut price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

Viral video: ಚಲಿಸುತ್ತಿದ್ದ ಬಸ್ ನಿಂದ ಅಮ್ಮನ ಮಡಿಲಲ್ಲಿದ್ದ ಮಗು ಬಿದ್ದೇ ಹೋಯ್ತು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments