Webdunia - Bharat's app for daily news and videos

Install App

ವೈಮಾನಿಕ ಕ್ಷೇತ್ರಕ್ಕೆ ಹೊಸ ಬಲ ನೀಡಲಿದೆ: ನರೇಂದ್ರ ಮೋದಿ

Webdunia
ಗುರುವಾರ, 21 ಅಕ್ಟೋಬರ್ 2021 (07:46 IST)
ನವದೆಹಲಿ : ಏರ್ ಇಂಡಿಯಾ ಕಂಪನಿಯನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಟಾಟಾ ಗ್ರೂಪ್ ಸಿದ್ಧವಾಗುತ್ತಿದೆ. ಸರ್ಕಾರದ ಅಧೀನದಲ್ಲಿದ್ದ ಏರ್ ಇಂಡಿಯಾ ಹಸ್ತಾಂತರ ಪ್ರಕ್ರಿಯೆಯು ದೇಶದ ವೈಮಾನಿಕ ಕ್ಷೇತ್ರಕ್ಕೆ ಹೊಸ ಬಲ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ನಷ್ಟದಲ್ಲಿದ್ದ ಏರ್ ಇಂಡಿಯಾ ವಿಲೇವಾರಿ ಮಾಡುವ ಮೂಲಕ ಬಂಡವಾಳ ಹಿಂಪಡೆಯುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿತ್ತು.
ಕುಶಿನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಮಾತನಾಡಿದ ಮೋದಿ, ಏರ್ ಇಂಡಿಯಾ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡ ನಿರ್ಧಾರವು ದೇಶದ ವೈಮಾನಿಕ ರಂಗವನ್ನು ವೃತ್ತಿಪರವಾಗಿ ನಡೆಸಲು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಏರ್ ಇಂಡಿಯಾ ಖರೀದಿಗೆ ಟಾಟಾ ಗ್ರೂಪ್ ₹ 2,700 ನಗದು ಪಾವತಿಸಲಿದೆ. ಇದರ ಜೊತೆಗೆ ಏರ್ಇಂಡಿಯಾದ ಸಾಲದಲ್ಲಿ ₹ 15,300 ಕೋಟಿ ಮೊತ್ತದ ಜವಾಬ್ದಾರಿ ವಹಿಸಿಕೊಳ್ಳಲಿದೆ.
ಏರ್ ಇಂಡಿಯಾ ಜೊತೆಗೆ ಕಡಿಮೆ ವೆಚ್ಚದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವ ಕಂಪೆನಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಮತ್ತು ವಿಮಾನ ನಿಲ್ದಾಣಗಳಲ್ಲಿರುವ ಏರ್ ಇಂಡಿಯಾದ ಆಸ್ತಿ ನಿರ್ವಹಿಸುವ ‘ಅಸಿಟ್ಸ್’ ಉದ್ಯಮದಲ್ಲಿ ಅರ್ಧದಷ್ಟು ಪಾಲನ್ನು ಟಾಟಾ ಕಂಪೆನಿ ತನ್ನ ಸುಪರ್ದಿಗೆ ಪಡೆದುಕೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments