ವಿಶ್ವಾಸ ಪರೀಕ್ಷೆಯಲ್ಲಿ ಗೆದ್ದ ನರೇಂದ್ರ ಮೋದಿ

Webdunia
ಶುಕ್ರವಾರ, 11 ಆಗಸ್ಟ್ 2023 (07:37 IST)
ನವದೆಹಲಿ : ಲೋಕಸಭೆಯಲ್ಲಿ ನಿರೀಕ್ಷೆಯಂತೆ ಎಲ್ಲವೂ ನಡೆದಿದೆ. ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿಲುವಳಿಗೆ ಸೋಲಾಗಿದೆ. ಎರಡನೇ ಬಾರಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ವಿಶ್ವಾಸ ಪರೀಕ್ಷೆಯಲ್ಲಿ ಗೆದ್ದು ಬೀಗಿದೆ.
 
ವಿಪಕ್ಷಗಳ ಗೈರಿನಲ್ಲಿ ಧ್ವನಿಮತದ ಮೂಲಕ ಅವಿಶ್ವಾಸ ನಿಲುವಳಿಯನ್ನು ಎನ್ಡಿಎ ಸರ್ಕಾರ ಸೋಲಿಸಿದೆ. ಈ ಸೋಲನ್ನು ವಿಪಕ್ಷಗಳ ಕೂಟ ಕೂಡ ನಿರೀಕ್ಷೆ ಮಾಡಿತ್ತು. ಏಕೆಂದರೆ, ವಿಪಕ್ಷಗಳ ಕೂಟದ ಬಳಿ ಅಗತ್ಯ ಸಂಖ್ಯಾ ಬಲವೇ ಇರಲಿಲ್ಲ. ಮೋದಿಯನ್ನು ಸಂಸತ್ಗೆ ಕರೆಯಿಸಿ ಮಣಿಪುರ ಹಿಂಸಾಚಾರದ ಬಗ್ಗೆ ಹೇಳಿಕೆ ಕೊಡಿಸಬೇಕೆಂಬ ಏಕೈಕ ಉದ್ದೇಶದಿಂದ ಐಎನ್ಡಿಐಎ ಕೂಟ ಈ ನಿಲುವಳಿಯನ್ನು ಮಂಡಿಸಿತ್ತು. 

ಒಂದರ್ಥದಲ್ಲಿ ವಿಪಕ್ಷ ಕೂಟ ತಮ್ಮ ಉದ್ದೇಶ ಸಾಧನೆಯಲ್ಲಿ ಯಶಸ್ಸು ಸಾಧಿಸಿತು. ಕಾರಣ ಅವಿಶ್ವಾಸ ನಿಲುವಳಿ ಮೇಲಿನ ಚರ್ಚೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡು, ಮಣಿಪುರದ ಹಿಂಸಾಚಾರದ ಬಗ್ಗೆ ಸುದೀರ್ಘ ಹೇಳಿಕೆ ಕೊಟ್ಟರು.

ಅವಿಶ್ವಾಸ ನಿರ್ಣಯದ ಮೇಲೆ ಕಳೆದ ಮೂರು ದಿನಗಳಿಂದ ನಡೆದ ಚರ್ಚೆಯಲ್ಲಿ ಕೇಂದ್ರದ ವಿರುದ್ಧ ನಾನಾ ಆರೋಪ ಮಾಡಿದ್ದ ವಿಪಕ್ಷಗಳಿಗೆ ಲಘು ಧಾಟಿಯಲ್ಲಿಯೇ ಪ್ರಧಾನಿ ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಷ್ಟು ಜನರ ಪ್ರೀತಿ ಗಳಿಸಿದ್ದೀಯಲ್ಲಾ ಅಣ್ಣಾ..: ಡಿಕೆಶಿಗೆ ವಿಜಯ್ ಪ್ರಕಾಶ್ ಹೊಗಳಿಕೆ

Union Budget 2026: ರಾಜ್ಯಕ್ಕೆ ನಿರೀಕ್ಷಿಸಿದಷ್ಟು ಅನುದಾನ ಸಿಕ್ಕಿದೆಯೇ

ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments