Webdunia - Bharat's app for daily news and videos

Install App

ಅಂತರಿಕ್ಷದಲ್ಲಿರುವ ಸುನಿತಾ, ವಿಲ್ಮೋರ್ ಭೂಮಿಗೆ ಬರುವ ಬಗ್ಗೆ ಬಿಗ್‌ ಅಪ್‌ಟೇಟ್ ಕೊಟ್ಟ ನಾಸಾ

Sampriya
ಗುರುವಾರ, 8 ಆಗಸ್ಟ್ 2024 (20:35 IST)
Photo Courtesy X
ನವದೆಹಲಿ: ತಾಂತ್ರಿಕ ದೋಷದಿಂದ ಪ್ರಸ್ತುತ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದುಕೊಂಡಿರುವ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರು ಭೂಮಿಗೆ ವಾಪಾಸ್ಸಾಗುವ ಬಗ್ಗೆ ಸ್ಪೇಸ್‌ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

ಬೋಯಿಂಗ್‌ನ ಸ್ಟಾರ್‌ಲೈನರ್‌ ಗಗನನೌಕೆ ಸುರಕ್ಷಿತವಲ್ಲ ಎಂದಾದಲ್ಲಿ ಸ್ಪೇಸ್‌ ಎಕ್ಸ್‌ನ ಡ್ರ್ಯಾಗನ್ ಗಗನನೌಕೆಯಲ್ಲಿ ಈ ಇಬ್ಬರು ಗಗನಯಾತ್ರಿಗಳನ್ನು ಮುಂದಿನ ವರ್ಷ ಫೆಬ್ರುವರಿ ವೇಳೆಗೆ ಮರಳಿ ಭೂಮಿಗೆ ಕರೆತರುವ ಯೋಜನೆ ರೂಪಿಸಲಾಗುವುದು ಎಂದು ನಾಸಾ ಎಕ್ಸ್‌ನಲ್ಲಿ ಫೋಸ್ಟ್‌ ಹಂಚಿಕೊಂಡಿದ್ದಾರೆ.

ಇಬ್ಬರು ಗಗನಯಾತ್ರಿಗಳನ್ನು ಜೂನ್‌ನಲ್ಲಿ ಬೋಯಿಂಗ್‌ನ ಸ್ಟಾರ್‌ಲೈನರ್ ಕ್ಯಾಪ್ಸುಲ್‌ನಲ್ಲಿ ISS ಗೆ ಉಡಾವಣೆ ಮಾಡಲಾಯಿತು, ಇದು ಬಾಹ್ಯಾಕಾಶ ನೌಕೆಯ ಮೊದಲ ಸಿಬ್ಬಂದಿ ಕಾರ್ಯಾಚರಣೆಯನ್ನು ಗುರುತಿಸುತ್ತದೆ. ಈ ಕಾರ್ಯಾಚರಣೆಯನ್ನು ಆರಂಭದಲ್ಲಿ 10-ದಿನಗಳ ಅವಧಿಗೆ ನಿಗದಿಪಡಿಸಲಾಗಿತ್ತು, ಆದರೆ ಗಗನಯಾತ್ರಿಗಳು ISS ನಲ್ಲಿಯೇ ಉಳಿದಿದ್ದಾರೆ. ಅವರ ವಾಪಸಾತಿ ವಾಹನದ ನಿರ್ಧಾರವು ಇನ್ನೂ ಬಾಕಿ ಉಳಿದಿದೆ ಮತ್ತು ಇದು ಸ್ಟಾರ್‌ಲೈನರ್‌ನ ಸುರಕ್ಷತಾ ಮೌಲ್ಯಮಾಪನಗಳ ಫಲಿತಾಂಶದ ಮೇಲೆ ಹೆಚ್ಚು ಅವಲಂಬಿತವಾಗಿರುತ್ತದೆ.

ನಾಸಾ ಪ್ರಸ್ತುತ ಗಗನಯಾತ್ರಿಗಳ ಸುರಕ್ಷಿತ ವಾಪಸಾತಿಗಾಗಿ ಅನೇಕ ಆಯ್ಕೆಗಳನ್ನು ಅನ್ವೇಷಿಸುತ್ತಿದೆ. ಇವುಗಳಲ್ಲಿ, ಸ್ಪೇಸ್‌ಎಕ್ಸ್ ಅಭಿವೃದ್ಧಿಪಡಿಸಿದ ಕ್ರೂ ಡ್ರ್ಯಾಗನ್ ಅನ್ನು ಕಾರ್ಯಸಾಧ್ಯವಾದ ಪರ್ಯಾಯವೆಂದು ಪರಿಗಣಿಸಲಾಗಿದೆ. ಫೆಬ್ರವರಿ 2025 ರ ವೇಳೆಗೆ ಬೋಯಿಂಗ್‌ನ ಸ್ಟಾರ್‌ಲೈನರ್ ಭೂಮಿಯ ವಾತಾವರಣವನ್ನು ಮರು-ಪ್ರವೇಶಿಸಲು ಅಸುರಕ್ಷಿತವೆಂದು ಪರಿಗಣಿಸಿದರೆ, ವಿಲಿಯಮ್ಸ್ ಮತ್ತು ವಿಲ್ಮೋರ್‌ರನ್ನು ಮರಳಿ ಭೂಮಿಗೆ ಕರೆತರುವ ಕಾರ್ಯವನ್ನು ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ವಹಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments