Select Your Language

Notifications

webdunia
webdunia
webdunia
webdunia

ಲಾನ್ಸ್ ನಾಯಕ್ ಶಂಕರ್‌ಗೆ ಗೌರವ ವಂದನೆ

Nation
ಸತಾರಾ , ಮಂಗಳವಾರ, 20 ಸೆಪ್ಟಂಬರ್ 2016 (11:24 IST)
ಜಮ್ಮು ಮತ್ತು ಕಾಶ್ಮೀರದ ಉರಿ ಸೇನೆನೆಲೆಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಲಾನ್ಸ್ ನಾಯಕ ಜಿ ಶಂಕರ್ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.

ಶಂಕರ್ ಪಾರ್ಥಿವ ಶರೀರ ಅವರ ತವರಾದ ಮಹಾರಾಷ್ಟ್ರದ ಸತಾರಾಕ್ಕೆ ಆಗಮಿಸಿದ್ದು, ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಸೈನಿಕರು ಯೋಧ ಶಂಕರ್‌ಗೆ  ಗೌರವ ವಂದನೆ ಸಲ್ಲಿಸುತ್ತಿದ್ದಾರೆ. ಸಾಗರೋಪಾದಿಯಲ್ಲಿ ಬರುತ್ತಿರುವ ಜನರು ಹುತಾತ್ಮನ ದರ್ಶನ ಪಡೆದು ವಂದನೆ ಸಲ್ಲಿಸುತ್ತಿದ್ದಾರೆ. 
 
ಭಾನುವಾರ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ 18 ಯೋಧರಲ್ಲಿ ಜಿ. ಶಂಕರ್ ಕೂಡ ಒಬ್ಬರಾಗಿದ್ದಾರೆ. ಮನೆಮಗನನ್ನು ಕಳೆದುಕೊಂಡ ದುಃಖದ ನಡುವೆಯೂ ಆತನ ತ್ಯಾಗಕ್ಕೆ ಕುಟುಂಬಸ್ಥರು ಅಭಿಮಾನವನ್ನು ವ್ಯಕ್ತ ಪಡಿಸಿದ್ದಾರೆ. 
 
ಇನ್ನೊಂದೆಡೆ ಬಿಹಾರದ ಹುತಾತ್ಮ ಸೈನಿಕ ಎಸ್‌ಕೆ ವಿದ್ಯಾರ್ಥಿ ತಂದೆ ಮಥುರಾ ಯಾದವ್ ಪಾಕಿಸ್ತಾನದ ವಿರುದ್ಧ ಸೇಡು ತೀರಿಸಿಕೊಳ್ಳಬೇಕು. ಇಲ್ಲದಿದ್ದರೆ ನಾನು ನನ್ನ ಉಳಿದ ಮಕ್ಕಳನ್ನು ಸೈನ್ಯಕ್ಕೆ ಕಳುಹಿಸಲಾರೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

Share this Story:

Follow Webdunia kannada

ಮುಂದಿನ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ಅರ್ಜಿ ವಿಚಾರಣೆ: ಬೆಂಗಳೂರು, ಮಂಡ್ಯದಲ್ಲಿ ತೀವ್ರ ಕಟ್ಟೆಚ್ಚರ