Webdunia - Bharat's app for daily news and videos

Install App

ದೇಶಕ್ಕೇ ಬೆಂಕಿ ಬಿದ್ದಿದೆ: ರಾಹಲ್ ಗಾಂಧಿ

Webdunia
ಗುರುವಾರ, 25 ಜನವರಿ 2018 (10:26 IST)
ನವದೆಹಲಿ: ಪದ್ಮಾವತ್ ಸಿನಿಮಾ ಬಿಡುಗಡೆ ವಿರೋಧಿಸಿ ಗುರ್ ಗಾಂವ್ ನಲ್ಲಿ ಶಾಲಾ ಬಸ್ ಒಂದಕ್ಕೆ ಬೆಂಕಿ ಹಚ್ಚಿರುವ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿಯಿಂದಾಗಿ ದೇಶಕ್ಕೇ ಬೆಂಕಿ ಬಿದ್ದಿದೆ ಎಂದಿದ್ದಾರೆ.
 

‘ಮಕ್ಕಳ ಮೇಲಿನ ದೌರ್ಜನ್ಯವನ್ನು ಸಮರ್ಥಿಸಲು ಯಾವುದೇ ಕಾರಣಗಳಿಲ್ಲ. ಬಿಜೆಪಿ ದೇಶದೆಲ್ಲೆಡೆ, ಧ್ವೇಷ, ಹಿಂಸೆ ಹರಡುತ್ತಿದೆ. ದೇಶವೇ ಈ ಬೆಂಕಿಯಲ್ಲಿ ಉರಿಯುತ್ತಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.

ಪದ್ಮಾವತ್ ಸಿನಿಮಾ ಇಂದು ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ರಜಪೂತ ವೀರ ಮಹಿಳೆ ಪದ್ಮಾವತಿಯನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಕೆಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಲೇ ಇವೆ.  ಇವೆಲ್ಲದರ ಮಧ್ಯೆ ಇಂದು ಚಿತ್ರ ಬಿಡುಗಡೆಯಾಗಿದೆ. ಇದನ್ನು ವಿರೋಧಿಸಿ ನಿನ್ನೆ ಪ್ರತಿಭಟನಾಕಾರರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಗುರ್ ಗಾಂವ್ ನಲ್ಲಿ ಕಿಡಿಗೇಡಿಗಳು ಶಾಲಾ ಮಕ್ಕಳಿದ್ದ ಬಸ್ ಗೆ ಬೆಂಕಿ ಹಚ್ಚಿದ ವಿಡಿಯೋ ಭಾರೀ ವೈರಲ್ ಆಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments