Select Your Language

Notifications

webdunia
webdunia
webdunia
webdunia

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಖುದ್ದು ಹಾಜರಾತಿಗೆ ಹೈಕೋರ್ಟ್ ವಿನಾಯಿತಿ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಖುದ್ದು ಹಾಜರಾತಿಗೆ ಹೈಕೋರ್ಟ್ ವಿನಾಯಿತಿ
ನವದೆಹಲಿ , ಶನಿವಾರ, 20 ಫೆಬ್ರವರಿ 2016 (15:26 IST)
ನ್ಯಾಷನಲ್ ಹೆರಾಲ್ಡ್  ಪ್ರಕರಣದಲ್ಲಿ ಖುದ್ದು ಹಾಜರಾತಿಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಹೈಕೋರ್ಟ್ ವಿನಾಯಿತಿ ನೀಡಿದೆ.
 
ಸುಪ್ರೀಂಕೋರ್ಟ್ ನಿರ್ದೇಶನದಂತೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಸೋನಿಯಾ ಮತ್ತು ರಾಹುಲ್ ಅವರಿಗೆ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿ ಹೈಕೋರ್ಟ್ ತೀರ್ಪು ನೀಡಿದೆ.
 
ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಸುಪ್ರೀಂಕೋರ್ಟ್‌ನಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವ್ಯವಹಾರವಾಗಿದೆ ಎಂದು ದೂರು ಸಲ್ಲಿಸಿದ್ದರು.
 
ದೂರಿನ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಆರೋಪಿಗಳು ದೇಶದಲ್ಲಿ ಮಹತ್ವದ ಸ್ಥಾನಗಳಲ್ಲಿರುವುದರಿಂದ ಪರಾರಿಯಾಗುವ ಸಾಧ್ಯತೆಗಳಿಲ್ಲ ಎಂದು ಅಭಿಪ್ರಾಯಪಟ್ಟು ಖುದ್ದು ಹಾಜರಾತಿಗೆ ವಿನಾಯಿತಿ ನೀಡಿತ್ತು.
 

Share this Story:

Follow Webdunia kannada