Webdunia - Bharat's app for daily news and videos

Install App

ಇಂದು ಬಿಜೆಪಿಯಿಂದ ರಾಷ್ಟ್ರಾದ್ಯಂತ ಸೇವಾ ಕಾರ್ಯ

Webdunia
ಗುರುವಾರ, 7 ಅಕ್ಟೋಬರ್ 2021 (12:02 IST)
ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಜೀವನಕ್ಕೆ ಕಾಲಿರಿಸಿ ಇಂದಿಗೆ 20ವರ್ಷ ಆಗುತ್ತದೆ. ಅದರಲ್ಲೂ ಸರ್ಕಾರದ ಮುಖ್ಯ ಹುದ್ದೆಯಲ್ಲೇ ಅವರು 20ವರ್ಷಗಳಿಂದ ನಿರಂತರವಾಗಿ ಮುಂದುವರಿಯುತ್ತಿದ್ದಾರೆ.

ಪ್ರಧಾನಿ ಮೋದಿ 2001ರ ಅಕ್ಟೋಬರ್ 7ರಂದು ಗುಜರಾತ್ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 2001ರಿಂದ 2014ರವರೆಗೆ ಗುಜರಾತ್ನ ಸಿಎಂ ಆಗಿ ಸೇವೆ ಸಲ್ಲಿಸಿದ್ದ ಅವರು, ಅಲ್ಲಿಂದ 2014ರ ಲೋಕಸಭಾ ಚುನಾವಣೆಯಲ್ಲಿ ಎಂಪಿ ಸೀಟ್ನಿಂದ ಗೆದ್ದು ಪ್ರಧಾನಮಂತ್ರಿ ಹುದ್ದೆಗೆ ಏರಿದರು. ಇದೀಗ ಎರಡನೇ ಅವಧಿಗೆ ಮುಂದುವರಿಯುತ್ತಿದ್ದಾರೆ. ಈ ವಿಶೇಷ ಕಾರಣಕ್ಕಾಗಿ ಇಂದು ಬಿಜೆಪಿ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಸಾರ್ವಜನಿಕ ಸೇವೆಯ 20ವರ್ಷಗಳಲ್ಲಿ 7 ವರ್ಷ ಪ್ರಧಾನಿ ಹುದ್ದೆ ನಿಭಾಯಿಸಿರುವ ನರೇಂದ್ರ ಮೋದಿ ಅವಧಿ ಇನ್ನೂ ಮೂರು ವರ್ಷ ಇದೆ. ಇಂದಿಗೆ ಸರಿಯಾಗಿ 20ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ. ಹಾಗೇ, ನರೇಂದ್ರ ಮೋದಿಯವರು ಸಾರ್ವಜನಿಕರಿಗೆ ಕೊಟ್ಟ ಅತ್ಯುಪಯೋಗಿ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಿದೆ.  ಪ್ರಧಾನಿ ಮೋದಿಯವರ ಬಹುಮುಖ್ಯ, ಮಹತ್ವಾಕಾಂಕ್ಷಿ ಯೋಜನೆಗಳಲ್ಲಾದ ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಇಂದು ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ನಡೆಸುವರು. ಅದರಲ್ಲೂ ಮುಖ್ಯವಾಗಿ ನದಿ ಶುದ್ಧೀಕರಣ ಕಾರ್ಯ ನಡೆಯಲಿದೆ.
ಇತ್ತೀಚೆಗಷ್ಟೇ ಪ್ರಧಾನಿ ನರೇಂದರ ಮೋದಿಯವರು ಸ್ವಚ್ಛ ಭಾರತ್ 2.0 ಮಿಷನ್ಗೆ ಚಾಲನೆ ನೀಡಿದ್ದರು. ಭಾರತದ ಪ್ರತಿ ನದಿಯೂ ಕೊಳಚೆ ನೀರಿನಿಂದ ಮುಕ್ತವಾಗಿ, ಜಲ ಸಂರಕ್ಷಣೆಯಾಗಬೇಕು. ಈ ಉದ್ದೇಶ ಇಟ್ಟುಕೊಂಡು ಸ್ವಚ್ಛ ಭಾರತ್ 2.0 ಉದ್ಘಾಟನೆಯಾಗಿದೆ ಎಂದಿದ್ದರು. ಅದರಂತೆ ಇಂದು ಎಲ್ಲೆಡೆ ನದಿಗಳ ಸ್ವಚ್ಛತೆ ನಡೆಯಲಿದೆ. ಹಾಗೇ, ಕೊರೊನಾ ಲಸಿಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನೂ ಬಿಜೆಪಿ ಕಾರ್ಯಕರ್ತರು ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

Viral Video, ಪಾಟ್ನಾ: ಹಾಡಹಗಲೇ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಂದ ಐವರ ಗುಂಪು

ಬಿಜೆಪಿ ಶಾಸಕರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡ್ತಿದೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments