Select Your Language

Notifications

webdunia
webdunia
webdunia
webdunia

ಪಂಜಾಬ್ ರಾಜ್ಯದಿಂದ ದೂರವಿರುವಂತೆ ಕೋರಿದ್ದರಿಂದ ರಾಜ್ಯಸಭೆಗೆ ರಾಜೀನಾಮೆ: ನವಜೋತ್ ಸಿದ್ದು

ನವಜೋತ್ ಸಿಂಗ್ ಸಿದ್ದು
ನವದೆಹಲಿ , ಸೋಮವಾರ, 25 ಜುಲೈ 2016 (14:03 IST)
ಪಂಜಾಬ್ ರಾಜ್ಯದಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದ್ದರಿಂದ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ಮುಖಂಡ ನವಜೋತ್ ಸಿಂಗ್ ಸಿದ್ದು ರಾಜೀನಾಮೆ ನೀಡಿದ ನಂತರ ಮೊದಲ ಬಾರಿಗೆ ತಮ್ಮ ಮೌನ ಮುರಿದಿದ್ದಾರೆ.
 
ತಮ್ಮ ನಿವಾಸದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಜಾಬ್ ರಾಜ್ಯದಿಂದ ದೂರವಿರಲು ಹೈಕಮಾಂಡ್ ಕಟ್ಟಪ್ಪಣೆ ವಿಧಿಸಲಾಗಿತ್ತು. ಆದರೆ, ಅದು ಸಾಧ್ಯವಿಲ್ಲವಾದ್ದರಿಂದ ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂತು ಎಂದು ತಿಳಿಸಿದ್ದಾರೆ. 
 
ಆದರೆ, ಆಮ್ ಆದ್ಮಿ ಪಕ್ಷವನ್ನು ಸೇರುವ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಡಲು ನಿರಾಕರಿಸಿದರು.ಆದರೆ, ಪಂಜಾಬ್ ರಾಜ್ಯದ ಹಿತಾಸಕ್ತಿ ಅವಶ್ಯವಿದ್ದಲ್ಲಿ ನಾನಿರುತ್ತೇನೆ ಎಂದು ಮಾರ್ಮಿಕವಾಗಿ ನುಡಿದರು. 
 
ಕಳೆದ 2004 ರಿಂದ 2014 ರವರೆಗೆ ಅಮೃತ್‌ಸರ್‌ದಿಂದ ನಿರಂತರವಾಗಿ ಸಂಸದರಾಗಿ ಆಯ್ಕೆಯಾಗಿ ಬಂದಿದ್ದ ಸಿದ್ದು ಅವರನ್ನು 2014ರಲ್ಲಿ ಲೋಕಸಭೆಯ ಸೀಟನ್ನು ಅರುಣ್ ಜೇಟ್ಲಿಗೆ ಬಿಟ್ಟುಕೊಡುವಂತೆ ಬಿಜೆಪಿ ಹೈಕಮಾಂಡ್ ಆದೇಶಿಸಿತು. ಅದರೆ, ಜೇಟ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಜೇಟ್ಲಿ ಸೋಲನುಭವಿಸಬೇಕಾಯಿತು.  
 
2014ರಲ್ಲಿ ಮೋದಿ ಅಲೆ ಬಂದಾಗ ನಾನು ಸೇರಿದಂತೆ ದೇಶವೇ ಅದರಲ್ಲಿ ಕೊಚ್ಚಿ ಹೋಯಿತು. ಆದರೆ, ಫಲಿತಾಂಶ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಬರಲಿಲ್ಲ ಎಂದರು.
 
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿದ್ದು ಆಮ್ ಆದ್ಮಿ ಪಕ್ಷದ ಸ್ಟಾರ್ ಪ್ರಚಾರಕರಾಗಿ ಹೊರಹೊಮ್ಮುವ ಸಾಧ್ಯತೆಗಳಿವೆ ಎನ್ನಲಾಗಿದೆ.
 
ವಿಧಾನಸಭೆ ಚುನಾವಣೆಯಲ್ಲಿ ಶಿರೋಮಣಿ ಅಕಾಲಿ ದಳ- ಬಿಜೆಪಿ ಮೈತ್ರಿಕೂಟ ಮತ್ತು ಕಾಂಗ್ರೆಸ್ ಹಾಗೂ ಆಪ್ ಪಕ್ಷದ ನಡುವೆ ತೀವ್ರ ಹಣಾಹಣಿ ನಡೆಯುವ ಸಾಧ್ಯತೆಗಳಿವೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸೆನ್ಸೆಕ್ಸ್: 66 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡ ಶೇರುಸೂಚ್ಯಂಕ