ಪುಲ್ವಾಮಾ ದಾಳಿ: ಪಾಕ್ ಪರ ಮಾತನಾಡಿದ್ದಕ್ಕೆ ನವಜೋತ್ ಸಿಂಗ್ ಸಿದು ವಿರುದ್ಧ ಆಕ್ರೋಶ

Webdunia
ಶನಿವಾರ, 16 ಫೆಬ್ರವರಿ 2019 (11:14 IST)
ನವದೆಹಲಿ: ಪುಲ್ವಾಮಾದಲ್ಲಿ ಯೋಧರ ಮೇಲೆ ಜೈಶ್ ಉಗ್ರರ ಅಟ್ಟಹಾಸದ ಬಳಿಕವೂ ಪಾಕಿಸ್ತಾನವನ್ನು ಬೆಂಬಲಿಸಿ ಮಾತನಾಡಿದ ಕಾಂಗ್ರೆಸ್ ನಾಯಕ, ಪಂಜಾಬ್ ಸಚಿವ ನವಜೋತ್ ಸಿಂಗ್ ಸಿದು ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.


ಪುಲ್ವಾಮಾ ದಾಳಿಯನ್ನು ಖಂಡಿಸಿ ಮಾತನಾಡಿದ್ದ ನವಜೋತ್ ಬಳಿಕ ಇದಕ್ಕೆ ಇಡೀ ಪಾಕಿಸ್ತಾನವನ್ನೇ ದೂರುವುದು ಸರಿಯಲ್ಲ ಎಂದಿದ್ದರು. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಿದು ಭಾಗವಹಿಸುವ ‘ಕಪಿಲ್ ಶರ್ಮಾ ಶೋ’ ಮೇಲೂ ನಿಷೇಧ ಹೇರಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

‘ಪುಲ್ವಾಮ ದಾಳಿ ಖಂಡನೀಯ. ಆದರೆ ಕೆಲವೇ ಕೆಲವು ಕೆಟ್ಟ ವ್ಯಕ್ತಿಗಳ ಕುಕೃತ್ಯಕ್ಕೆ ಇಡೀ ದೇಶವನ್ನು ದೂಷಿಸುವುದು ಸರಿಯಲ್ಲ’ ಎಂದು ಸಿದು ಹೇಳಿದ್ದರು. ಇದಕ್ಕೂ ಮೊದಲು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪದಗ್ರಹಣ ಸಮಾರಂಭಕ್ಕೆ ಹೋಗಿ ಪಾಕ್ ಸೇನಾ ನಾಯಕನನ್ನು ಸಿದು ಅಪ್ಪಿಕೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ಪಾಕ್ ಪರವಾಗಿ ಮಾತನಾಡಿದ ವಿವಾದಕ್ಕೀಡಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments