Webdunia - Bharat's app for daily news and videos

Install App

ಉರಿ ದಾಳಿ ಕಾಶ್ಮೀರ ದಬ್ಬಾಳಿಕೆ ಪ್ರತಿಕ್ರಿಯೆ: ಮತ್ತೆ ಕೆಣಕಿದ ಷರೀಫ್

Webdunia
ಶನಿವಾರ, 24 ಸೆಪ್ಟಂಬರ್ 2016 (16:05 IST)
ಉರಿ ಸೇನಾಶಿಬಿರದ ಮೇಲಿನ ದಾಳಿ ಕಾಶ್ಮೀರದಲ್ಲಿನ ಪರಿಸ್ಥಿತಿಗೆ ಅಲ್ಲಿನ ಜನರ ಪ್ರತಿಕ್ರಿಯೆಯಾಗಿರಬಹುದು ಎನ್ನುವುದರ ಮೂಲಕ ಪಾಕ್ ಪ್ರಧಾನಿ ನವಾಜ್ ಷರೀಫ್ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. 

 
ಕಾಶ್ಮೀರ ಸಮಸ್ಯೆಯಲ್ಲಿ ಭಾರತವನ್ನು ಸಿಕ್ಕಿ ಹಾಕಿಸಲು ವಿಶ್ವಸಂಸ್ಥೆಯಲ್ಲಿ ಅವರು ಮಾಡಿದ ಪ್ರಯತ್ನ ವಿಫಲವಾದ ಬಳಿಕ ಸಹ ಭಾರತವನ್ನೇ ಆರೋಪಿಯಾಗಿಸುವ ಮೂರ್ಖತನವನ್ನು ಮುಂದುವರೆಸಿರುವ ಷರೀಫ್, ಯಾವುದೇ ಸಾಕ್ಷ್ಯಾಧಾರವಿಲ್ಲದೇ ಭಾರತ ಪಾಕ್ ವಿರುದ್ಧ ದೋಷಾರೋಪಣೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. 
 
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗವಹಿಸಿ ತಮ್ಮ ತವರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಲಂಡನ್‌ನಲ್ಲಿ ಮಾತನ್ನಾಡುತ್ತಿದ್ದ ಷರೀಫ್, ಉರಿ ದಾಳಿ ಕಾಶ್ಮೀರದಲ್ಲಿ ಸೇನೆ ನಡೆಸುತ್ತಿರುವ ದಬ್ಬಾಳಿಕೆಗೆ ಅಲ್ಲಿನವರು ನೀಡಿರುವ ಪ್ರತಿಕ್ರಿಯೆಯಾಗಿರಬಹುದು. ಕಳೆದ 2 ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರದಿಂದ ಸಾವನ್ನಪ್ಪಿದ, ಬಾಧಿತರಾದವರ ಸಂಬಂಧಿಗಳು, ಪ್ರೀತಿಪಾತ್ರರು ತಮ್ಮ ಆಕ್ರೋಶವನ್ನು ಈ ರೀತಿಯಲ್ಲಿ ಹೊರಹಾಕಿರಬಹುದು ಎಂದು ಹೇಳಿದ್ದಾರೆ. 
 
ಯಾವುದೇ ತನಿಖೆ, ಪುರಾವೆ ಇಲ್ಲದೆ, ಪಾಕಿಸ್ತಾನದ ವಿರುದ್ಧ ಆರೋಪಿಸಿರುವ ಭಾರತ "ಬೇಜವಾಬ್ದಾರಿ ರೀತಿಯಲ್ಲಿ" ವರ್ತಿಸಿದೆ. ದಾಳಿ ನಡೆದ ಗಂಟೆಯೊಳಗೆ ನಮ್ಮ ಮೇಲೆ ಗೂಬೆ ಕೂರಿಸಿದರೆ ಏನರ್ಥ ಎಂದು ಪಾಕ್ ಮಾಧ್ಯಮಗಳ ಜತೆ ಮಾತನಾಡುತ್ತಿದ್ದ ಷರೀಫ್ ಹೇಳಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments