Webdunia - Bharat's app for daily news and videos

Install App

ಮಸೂದ್‌ನನ್ನು ಬಿಡುಗಡೆ ಮಾಡಿ ಎನ್‌ಡಿಎ ಸರ್ಕಾರ ಭದ್ರತೆಯೊಂದಿಗೆ ರಾಜಿ ಮಾಡಿಕೊಂಡಿತ್ತು

Webdunia
ಸೋಮವಾರ, 19 ಸೆಪ್ಟಂಬರ್ 2016 (16:17 IST)
ಕಾಶ್ಮೀರದ ಉರಿ ಪಟ್ಟಣದಲ್ಲಿ ನಡೆದ ದಾಳಿಯ ಹಿಂದೆ ಮಸೂದ್ ಅಜರ್ ನೇತೃತ್ವದ ಜೆಇಎಮ್ ಕೈವಾಡವಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಈ ಹಿಂದಿನ ಎನ್‌ಡಿಎ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  1999ರ ವಿಮಾನ್ ಹೈಜಾಕ್ ಸಂದರ್ಭದಲ್ಲಿ ಉಗ್ರ ಮಸೂದ್ ಅಜರ್‍‌ನನ್ನು ಬಿಡುಗಡೆ ಮಾಡುವ ಮೂಲಕ ಅಂದು ಆಡಳಿತದಲ್ಲಿದ್ದ ಎನ್‌ಡಿಎ ಸರ್ಕಾರ ಭದ್ರತೆಯೊಂದಿಗೆ ರಾಜಿ ಮಾಡಿಕೊಂಡಿತ್ತು ಎಂದು ಅವರು ಆರೋಪಿಸಿದ್ದಾರೆ. 
ಸರಣಿ ಟ್ವೀಟ್ ಪ್ರಕಟಿಸಿರುವ ಅವರು, ಮಸೂದ್ ಅಜರ್‌ನನ್ನು ಬಿಡುಗಡೆ ಮಾಡಿಸಲು ಉಗ್ರರು ಭಾರತೀಯ ವಿಮಾನವನ್ನು ಅಪಹರಿಸಿದ್ದರು. ಉಗ್ರರ ಒತ್ತಡಕ್ಕೆ ಮಣಿದಿದ್ದ ಸರ್ಕಾರ ರಾಷ್ಟ್ರೀಯ ಭದ್ರತೆಯೊಂದಿಗೆ ರಾಜಿ ಮಾಡಿಕೊಂಡು ಆತನನ್ನು ಬಿಡುಗಡೆ ಮಾಡಿತ್ತು. ಇದೊಂದು ಪಾಠವಲ್ಲವೇ? ರಾಷ್ಟ್ರೀಯ ಭದ್ರತೆಯೊಂದಿಗೆ ಎಂದಿಗೂ ಕೂಡ ರಾಜಿ ಮಾಡಿಕೊಳ್ಳಬಾರದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರತಿಪಾದಿಸಿದ್ದಾರೆ. 
 
ಉರಿಯಲ್ಲಿ ನಡೆದಿರುವ ದಾಳಿಯನ್ನು ಖಂಡಿಸಿರುವ ಅವರು ಪಾಕಿಸ್ತಾನದ ಮೇಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಬೇಕಿದೆ ಎಂದು ಆಗ್ರಹಿಸಿದ್ದು, ಗಡಿ ಪ್ರದೇಶದಲ್ಲಿರುವ ಸೇನಾ ಕಚೇರಿಯನ್ನು ಕಾಪಾಡುವಲ್ಲಿ ಸೈನಿಕರು ವಿಫಲವಾಗುರುವದಕ್ಕೆ ಅವರು ಖೇದ ವ್ಯಕ್ತ ಪಡಿಸಿದ್ದಾರೆ. 
 
1999 ರ ಡೆಸೆಂಬರ್ 24 ರಂದು ನೇಪಾಳದಿಂದ ದೆಹಲಿ ಕಡೆ ಬರುತ್ತಿದ್ದ ಭಾರತೀಯ ವಿಮಾನವನ್ನು ಉಗ್ರರು ಅಪಹರಿಸಿದ್ದರು. ಮಸೂದ್ ಅಜರ್‌ನನ್ನು ಬಿಡುಗಡೆ ಮಾಡದಿದ್ದರೆ ವಿಮಾನದಲ್ಲಿರುವ ಪ್ರಯಾಣಿಕರನ್ನು ಜೀವಂತ ಉಳಿಸುವುದಿಲ್ಲ ಎಂದು ಉಗ್ರರು ಬೆದರಿಕೆ ಒಡ್ಡಿದ್ದ ಹಿನ್ನೆಲೆಯಲ್ಲಿ ಅಂದಿನ ಎನ್‌ಡಿಎ ಸರ್ಕಾರ ಮಸೂದ್ ಅಜರ್‌ನನ್ನು ಬಿಡುಗಡೆಗೊಳಿಸಿತ್ತು. ಅಂದು 176 ಜನರ ಪ್ರಾಣ ಉಳಿಸಿಕೊಳ್ಳಲು ದೇಶದ ಭದ್ರತೆಯೊಂದಿಗೆ ಸರ್ಕಾರ ರಾಜಿ ಮಾಡಿಕೊಂಡಿತ್ತು. ಅದರ ಫಲ ಇಂದು ಉಣ್ಣಬೇಕಿದೆ ಎಂದು ದಿಗ್ವಿಜಯ್ ಕಿಡಿಕಾರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments