Publish Date: Fri, 26 Apr 2019 (17:10 IST)
Updated Date: Fri, 26 Apr 2019 (17:15 IST)
ಎನ್ ಡಿ ಎ ಮೈತ್ರಿಕೂಟದ ಪ್ರಮುಖರೊಂದಿಗೆ ಶಕ್ತಿ ಪ್ರದರ್ಶನ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ಮಾಡಿದ್ರು.
ಉತ್ತರ ಪ್ರದೇಶದ ದೇವನಗರಿ ವಾರಾಣಾಸಿ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆಬಯಸಿ ಬಿಜೆಪಿ ಅಭ್ಯರ್ಥಿಯಾಗಿ ಮೋದಿ ನಾಮಪತ್ರ ಸಲ್ಲಿಸಿದ್ರು.
ಅಮಿತ್ ಷಾ, ನಿತಿನ್ ಕುಮಾರ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ರಾಮ್ ವಿಲಾಸ್ ಪಾಸ್ವಾನ್ ಮೊದಲಾದವರು ಹಾಜರಿದ್ರು. ನಾಮಪತ್ರ ಸಲ್ಲಿಕೆಗೂ ಮುನ್ನ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ರು.
ಮೇ 19ರಂದು ಮೋದಿ ಸ್ಪರ್ಧೆ ಮಾಡಿರುವ ಕ್ಷೇತ್ರದಲ್ಲಿ 7 ನೇ ಹಂತದಲ್ಲಿ ಮತದಾನ ನಡೆಯಲಿದೆ.