Select Your Language

Notifications

webdunia
webdunia
webdunia
webdunia

ಸರ್ವಾಧಿಕಾರಿಗಳಿಂದ ದೇಶವನ್ನು ಉಳಿಸುವ ಅಗತ್ಯವಿದೆ: ಕೇಜ್ರಿವಾಲ್

ಅರವಿಂದ್ ಕೇಜ್ರಿವಾಲ್
ನವದೆಹಲಿ , ಗುರುವಾರ, 26 ಜನವರಿ 2017 (13:23 IST)
ಗಣರಾಜ್ಯೋತ್ಸವದ ದಿನದಂದು ದೇಶದ ಜನತೆಗೆ ಶುಭಕೋರಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸರ್ವಾಧಿಕಾರಿಗಳಿಂದ ದೇಶವನ್ನು ಉಳಿಸುವ ಅಗತ್ಯವಿದೆ ಎಂದು ಕರೆ ನೀಡಿದರು. 
 
ಹಿಟ್ಲರ್‌ನಂತರ ಸರ್ವಾಧಿಕಾರಿಗಳು ದೇಶವನ್ನು ಅಧೋಗತಿಗೆ ತೆಗೆದುಕೊಂಡು ಹೋಗುತ್ತಿದ್ದು ಇಂತಹ ವಿಚ್ಚಿದ್ರಕಾರಿ ಶಕ್ತಿಗಳ ವಿರುದ್ಧ ದೇಶದ ಜನತೆ ಒಂದಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
 
ಗಣರಾಜ್ಯೋತ್ಸವದ ಒಂದು ದಿನ ಮುಂಚೆ ಸಿಬಿಐ ಅಧಿಕಾರಿಗಳು ದೆಹಲಿ ಸರಕಾರಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ವಶಪಡಿಸಿಕೊಂಡಿರುವುದಕ್ಕೆ ವಾಗ್ದಾಳಿ ನಡೆಸಿದ ಅವರು,ಪ್ರಧಾನಿ ಮೋದಿಯ ಹುನ್ನಾರದಿಂದ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಆರೋಪಿಸಿದರು.
 
ಪ್ರಧಾನಿ ಮೋದಿ ಸರಕಾರ ವಿಪಕ್ಷಗಳ ಅಡಳಿತವಿರುವ ರಾಜ್ಯಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದೆ. ಉತ್ತರಾಖಂಡ, ಸೇರಿದಂತೆ ಅನೇಕ ರಾಜ್ಯಗಳಲ್ಲಿ ಸರಕಾರವನ್ನು ಉರುಳಿಸಿ ಕೋರ್ಟ್‌ಗಳಿಂದ ಛೀಮಾರಿ ಹಾಕಿಸಿಕೊಂಡರೂ ತಮ್ಮ ನಡುವಳಿಕೆಯಲ್ಲಿ ಬದಲಾಯಿಸಿಕೊಂಡಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪನವರಿಗೆ ಬ್ರಿಗೇಡ್ ಭಯ, ಅದಕ್ಕೇ ಹೀಗೆಲ್ಲಾ ಮಾಡ್ತಾರೆ ಎಂದು ಈಶ್ವರಪ್ಪ