ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ನೀತಿ ಆಯೋಗ ಸಭೆ: ಏನಿದು ನೀತಿ ಆಯೋಗ, ಇದಕ್ಕೆ ಬಹಿಷ್ಕರಿಸುತ್ತಿರುವ ಸಿಎಂಗಳು ಯಾರೆಲ್ಲ

Krishnaveni K
ಶನಿವಾರ, 27 ಜುಲೈ 2024 (10:28 IST)
ನವದೆಹಲಿ: ಪ್ರಧಾನ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ನೀತಿ ಆಯೋಗದ ಸಭೆ ನಡೆಯಲಿದ್ದು, ಕರ್ನಾಟಕ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯನ್ನು ಬಹಿಷ್ಕರಿಸುತ್ತಿದ್ದಾರೆ.

ಕೇಂದ್ರ ಬಜೆಟ್ ನಲ್ಲಿ ವಿಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ಅನುದಾನ ಕೊಟ್ಟಿಲ್ಲ ಎನ್ನುವುದು ಈ ರಾಜ್ಯಗಳ ಮುಖ್ಯಮಂತ್ರಿಗಳ ಅಸಮಾಧಾನವಾಗಿದೆ. ಈ ಕಾರಣಕ್ಕೆ ಕರ್ನಾಟಕ, ಕೇರಳ, ತೆಲಂಗಾಣ, ತಮಿಳುನಾಡು, ದೆಹಲಿ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳು ಇಂದಿನ ಸಭೆಗೆ ಗೈರಾಗಲಿದ್ದಾರೆ. ಆದರೆ ಇಂಡಿಯಾ ಒಕ್ಕೂಟವನ್ನು ಧಿಕ್ಕರಿಸಿ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆಗೆ ಹಾಜರಾಗುತ್ತಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ 9 ನೇ ಆಡಳಿತ ಸಮಿತಿ ಸಭೆ ನಡೆಯುತ್ತಿದೆ. ಈ ಸಭೆಯು ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಯೋಗದಿಂದ ಆಡಳಿತ ಸುಧಾರಣೆ ಮಾಡುವ ಬಗ್ಗೆ ಸಲಹೆಗಳನ್ನು ನೀಡುವುದು ಈ ನೀತಿ ಆಯೋಗದ ಸಭೆಯ ಉದ್ದೇಶ. ಈ ಸಭೆಯಲ್ಲಿ ಈ ಬಾರಿ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಶಿಕ್ಷಣದ ಬಗ್ಗೆ ವಿಶೇಷವಾಗಿ ಚರ್ಚೆಯಾಗಲಿದೆ ಎನ್ನಲಾಗಿದೆ.

ಆರ್ಥಿಕಾಭಿವೃದ್ಧಿ ಸಮಾಜಿಕ ಪ್ರಗತಿ ಮತ್ತು ಉತ್ತಮ ಆಡಳಿತ ಸೇರಿದಂತೆ ಒಟ್ಟು 10 ವಲಯವಾರು ವಿಷಯಾಧಾರಿತ ದೃಷ್ಟಿಕೋನಗಳನ್ನು ಈ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ದೇಶದ ಪ್ರಗತಿಗೆ ಯೋಜನೆ ರೂಪಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ದೀಪಾವಳಿ ಸಂದರ್ಭದಲ್ಲಿ ಅವಘಡ: ಕೊಬ್ಬರಿ ಹೋರಿ ಸ್ಪರ್ಧೆಯ ಹೋರಿ ತಿವಿದು ಮೂವರು ಸಾವು

ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

ಮುಂದಿನ ಸುದ್ದಿ
Show comments