Webdunia - Bharat's app for daily news and videos

Install App

ಗಂಗಾಸ್ನಾನ ಮಾಡಿದ್ರೆ ಪಾಪ, ಬಡತನ ಕಳೆಯಲ್ಲ ಅನ್ನುವ ಮಲ್ಲಿಕಾರ್ಜುನ ಖರ್ಗೆ ಹಜ್ ಯಾತ್ರೆ ಬಗ್ಗೆ ಕಾಮೆಂಟ್ ಮಾಡ್ತೀರಾ

Krishnaveni K
ಮಂಗಳವಾರ, 28 ಜನವರಿ 2025 (11:30 IST)
ನವದೆಹಲಿ: ಗಂಗೆಯಲ್ಲಿ ಸ್ನಾನ ಮಾಡಿದ್ರೆ ಪಾಪ ಕಳೆದು ಹೋಗಲ್ಲ, ದೇಶದಲ್ಲಿ ಬಡತನ ನಿವಾರಣೆಯಾಗಲ್ಲ ಎನ್ನುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಧೈರ್ಯವಿದ್ದರೆ ಹಜ್ ಯಾತ್ರೆ ಬಗ್ಗೆ ಕಾಮೆಂಟ್ ಮಾಡಲಿ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ದೆಹಲಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ಮಾತನಾಡುವಾಗ ಕುಂಭಮೇಳದಲ್ಲಿ ಗಂಗಾಸ್ನಾನ ಮಾಡಿದ ಅಮಿತ್ ಶಾರನ್ನು ಟೀಕಿಸಿದ್ದರು. ಈ ವೇಳೆ ಅಮಿತ್ ಶಾ-ಮೋದಿ ಎಷ್ಟೇ ಬಾರಿ ಗಂಗಾ ನದಿಯಲ್ಲಿ ಸ್ನಾನ ಮಾಡಿದರೂ ಪಾಪ ಕಳೆಯಲ್ಲ. ಇವರು ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ದೇಶದಲ್ಲಿ ಬಡತನ ನಿವಾರಣೆಯಾಗುತ್ತಾ ಎಂದು ವ್ಯಂಗ್ಯ ಮಾಡಿದ್ದರು.

ಈ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದ ಅವರ ಕಾಮೆಂಟ್ ಗಳಿಗೆ ಕೇವಲ ಬಿಜೆಪಿ ಮಾತ್ರವಲ್ಲ, ಹಲವು ಹಿಂದೂಗಳಿಂದಲೂ ವಿರೋಧ ವ್ಯಕ್ತವಾಗಿದೆ. ಖರ್ಗೆಗೆ ಧೈರ್ಯವಿದ್ದರೆ ಮುಸಲ್ಮಾನ ಬಾಂಧವರ ಹಜ್ ಯಾತ್ರೆ ಬಗ್ಗೆ ಕಾಮೆಂಟ್ ಮಾಡಲಿ ಎಂದಿದ್ದಾರೆ.

ಖರ್ಗೆಯವರೇ ನಿಮಗೆ ಯಾವತ್ತೂ ಹಿಂದೂಗಳ ಆಚರಣೆಗಳೇ ಟಾರ್ಗೆಟ್ ಆಗುವುದು ಯಾಕೆ? ನೀವು ಯಾಕೆ ಹಜ್ ಯಾತ್ರೆ ಬಗ್ಗೆ ಕಾಮೆಂಟ್ ಮಾಡಲ್ಲ? ಹಜ್ ಯಾತ್ರೆ ಮಾಡುವುದರಿಂದ ಬಡತನ ನಿವಾರಣೆಯಾಗುತ್ತದಾ? ಎಂದು ಒಬ್ಬರು ಪ್ರಶ್ನೆ ಮಾಡಿದ್ದಾರೆ. ಮತ್ತೆ ಕೆಲವರು ನಾಸ್ತಿಕರಾಗುವುದು ತಪ್ಪಲ್ಲ, ಆದರೆ ಒಂದು ಧರ್ಮದ ಆಚರಣೆಯನ್ನು ಮಾತ್ರ ಟಾರ್ಗೆಟ್ ಮಾಡಿ ಮಾತನಾಡುವುದು ತಪ್ಪು ಎಂದಿದ್ದಾರೆ. ನಿಮ್ಮ ರಾಜಕೀಯ ಲಾಭಕ್ಕೆ ಹಿಂದೂ ಆಚರಣೆ, ಪವಿತ್ರ ಗಂಗೆಯನ್ನು ಎಳೆದು ತರುವುದು ಯಾಕೆ ಎಂದು ಹಲವರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments