ಅಂದು ಸೋನಿಯಾ ಟೀಕಿಸಿದ್ದ ಕೇಜ್ರಿವಾಲ್, ಇಂದು ಸೋನಿಯಾ ಬಳಿಯೇ ಸಹಾಯ ಕೇಳಿದ ಸುನಿತಾ ಕೇಜ್ರಿವಾಲ್

Krishnaveni K
ಸೋಮವಾರ, 1 ಏಪ್ರಿಲ್ 2024 (11:28 IST)
ನವದೆಹಲಿ: ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆದಿದ್ದ ಇಂಡಿಯಾ ಒಕ್ಕೂಟದ ಸಮಾವೇಶದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಒಟ್ಟಿಗೇ ಕೂತಿದ್ದು ಎಲ್ಲರ ಗಮನ ಸೆಳೆಯಿತು.

ಈ ಸಮಾವೇಶದಲ್ಲಿ ವೇದಿಕೆಗೆ ಬರುತ್ತಿದ್ದಂತೇ ಸೋನಿಯಾ ಗಾಂಧಿಯವರು ಸುನಿತಾ ಕೈ ಹಿಡಿದು ವಿಶ್ ಮಾಡಿದರು. ಬಳಿಕ ಇಬ್ಬರೂ ಆಪ್ತವಾಗಿ ಮಾತನಾಡುತ್ತಿದ್ದುದು ಕಂಡುಬಂತು. ಒಂದೆಡೆ ಕೇಜ್ರಿವಾಲ್ ಜೈಲಿನಲ್ಲಿದ್ದರೆ ಇತ್ತ ಸುನಿತಾ ಪತಿಯ ಸ್ಥಾನದಲ್ಲಿ ನಿಂತು ಇಂಡಿಯಾ ಒಕ್ಕೂಟ ಸಭೆಯಲ್ಲಿ ಪಾಲ್ಗೊಂಡಿದ್ದರು.

ಆದರೆ ಇದನ್ನು ಗಮನಿಸಿದ ನೆಟ್ಟಿಗರು ಸುನಿತಾಗೆ ಹಳೆಯದನ್ನು ನೆನಪಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ರಾಜಕೀಯಕ್ಕೆ ಬಂದ ಸಂದರ್ಭದಲ್ಲಿ ಸೋನಿಯಾ ಗಾಂಧಿಯನ್ನು ಭ್ರಷ್ಟೆ ಎಂದು ಬಹಿರಂಗವಾಗಿ ಭಾಷಣ ಮಾಡಿದ್ದರು. ಅಂದಿನ ಆ ವಿಡಿಯೋ ತುಣುಕನ್ನು ನೆಟ್ಟಿಗರು ಇದೀಗ ವೈರಲ್ ಮಾಡಿದ್ದಾರೆ.

ಹಿಂದೆ ಭ್ರಷ್ಟೆ ಎಂದು ಜರೆದಿದ್ದ ಅದೇ ಸೋನಿಯಾ ಈಗ ಕೇಜ್ರಿವಾಲ್ ಗೆ ತಮ್ಮನ್ನು ಉಳಿಸಿಕೊಳ್ಳಲು ಬೇಕಾಯಿತು ಎಂದು ಲೇವಡಿ ಮಾಡಿದ್ದಾರೆ. ಹಿಂದೆ ಭ್ರಷ್ಟೆ, ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಭಾಷಣ ಮಾಡಿದ್ದ ಕೇಜ್ರಿವಾಲ್ ಇಂದು ತಮ್ಮನ್ನು ಜೈಲಿನಿಂದ ಬಿಡಿಸಿಕೊಳ್ಳಲು ಅವರ ಸಹಾಯವನ್ನೇ ಕೇಳುತ್ತಿದ್ದಾರೆ ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments